ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರೀಕರಣ | ಬ್ಯಾಂಕಾಕ್‌ನಲ್ಲಿ ಕಾಣೆಯಾದವರು...

Last Updated 19 ಸೆಪ್ಟೆಂಬರ್ 2019, 12:01 IST
ಅಕ್ಷರ ಗಾತ್ರ

ಬಿಲ್ವ ಎಂಟರ್‌ಟೈನ್‍ಮೆಂಟ್ ಲಾಂಛನದಡಿ ನವೀನ್ ಕುಮಾರ್ ಜಿ.ಆರ್. ಬಂಡವಾಳ ಹೂಡಿರುವ ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಸಿನಿಮಾದ ಪ್ರಥಮ ಹಂತದ ಶೂಟಿಂಗ್‌ ಬ್ಯಾಂಕಾಕ್‍ನಲ್ಲಿ ಮುಕ್ತಾಯವಾಗಿದೆ. ನಟರಾದ ರವಿಶಂಕರ್, ರಂಗಾಯಣ ರಘು, ಚಿಕ್ಕಣ್ಣ, ತಬಲ ನಾಣಿ ಈ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು.

ಎರಡನೇ ಹಂತದ ಚಿತ್ರೀಕರಣ ಶೀಘ್ರವೇ ಆರಂಭವಾಗುವ ನಿರೀಕ್ಷೆಯಿದೆ. ಅನಿಲ್‌ ಕುಮಾರ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್ ಹೇಳಿದ್ದಾರೆ. ಈ ಹಿಂದೆ ಅವರು ‘ಶಕ್ತಿ’, ‘ದಿಲ್‍ವಾಲ’, ‘ಕೃಷ್ಣ ರುಕ್ಕು’,‘ರ‍್ಯಾಂಬೋ 2’, ‘ಕಿರಾತಕ 2’ ಮತ್ತು ‘ದಾರಿ ತಪ್ಪಿದ ಮಗ’ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ.

ಬಾಳಿನ ಮುಸ್ಸಂಜೆಯಲ್ಲಿರುವವರ ಬಗ್ಗೆ ಚಿತ್ರದಲ್ಲಿ ಹೇಳಲಾಗಿದೆಯಂತೆ. ಚಿತ್ರದನಾಲ್ಕು ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಛಾಯಾಗ್ರಹಣ ಶಿವಕುಮಾರ್ ಬಿ.ಕೆ. ಅವರದು. ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT