ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾದ ಸೃಷ್ಟಿಸಿದ ಅಜೇಯ್‌ ರಾವ್ ಪೋಸ್ಟರ್

Last Updated 29 ಜನವರಿ 2019, 13:43 IST
ಅಕ್ಷರ ಗಾತ್ರ

ಬೆಂಗಳೂರು:ನಟ ಕೃಷ್ಣ ಅಜೇಯ್‌ ರಾವ್‌ ನಟನೆಯ ಹೊಸ ಸಿನಿಮಾದ ಪೋಸ್ಟರ್‌ ವಿವಾದ ಸೃಷ್ಟಿಸಿದೆ.

ಇತ್ತೀಚೆಗೆ ಅಜೇಯ್‌ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆ ವೇಳೆ ಅವರ ಹೊಸ ಸಿನಿಮಾ ಘೋಷಣೆಯಾಗಿತ್ತು. ಜೊತೆಗೆ, ಅದರ ಪೋಸ್ಟರ್‌ ಕೂಡ ಬಿಡುಗಡೆಯಾಗಿತ್ತು. ಇದರಲ್ಲಿ ಅವರು ಪೊಲೀಸ್ ಅಧಿಕಾರಿಯಾಗಿ ಅರೆಬಟ್ಟೆಯಲ್ಲಿ ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಅಜೇಯ್‌ ಈ ಪೋಸ್ಟರ ಅನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

‘ಸಿನಿಮಾದ ಪ್ರಚಾರಕ್ಕಾಗಿ ಶ್ರೀಕೃಷ್ಣನಿಗೆ ಅವಹೇಳನ ಮಾಡಲಾಗಿದೆ. ನಟನ ಈ ವರ್ತನೆ ಸರಿಯಲ್ಲ. ಹಿಂದೂಗಳ ಭಾವನೆಗೆ ಅವಮಾನ ಮಾಡುವ ಈ ಚಿತ್ರಕ್ಕೆ ಅವಕಾಶ ನೀಡಬಾರದು’ ಎಂದು ಜನರು ಆಗ್ರಹಿಸಿದ್ದಾರೆ.

ಅಜೇಯ್‌ ರಾವ್ ನಟನೆಯ 27ನೇಸಿನಿಮಾಇದು. ಗುರು ದೇಶಪಾಂಡೆ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT