ಇತ್ತೀಚೆಗೆ ಅಜೇಯ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆ ವೇಳೆ ಅವರ ಹೊಸ ಸಿನಿಮಾ ಘೋಷಣೆಯಾಗಿತ್ತು. ಜೊತೆಗೆ, ಅದರ ಪೋಸ್ಟರ್ ಕೂಡ ಬಿಡುಗಡೆಯಾಗಿತ್ತು. ಇದರಲ್ಲಿ ಅವರು ಪೊಲೀಸ್ ಅಧಿಕಾರಿಯಾಗಿ ಅರೆಬಟ್ಟೆಯಲ್ಲಿ ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಅಜೇಯ್ ಈ ಪೋಸ್ಟರ ಅನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.