<p>ಆನ್ಲೈನ್ನಲ್ಲಿ ರಮ್ಮಿ, ಜೂಜಾಟವಾಡಿ ಬೀದಿಗೆ ಬಂದವರು ಅನೇಕರಿದ್ದಾರೆ. ರಮ್ಮಿ ಆಡಬೇಡಿ ಎಂದು ಜಾಗೃತಿ ಮೂಡಿಸುವ ಸಾಕಷ್ಟು ವಿಡಿಯೊಗಳು ಈಗಾಗಲೇ ವೈರಲ್ ಆಗಿವೆ. ಇದೀಗ ಆನ್ಲೈನ್ ರಮ್ಮಿ ಕುರಿತಾದ ಕಥೆ ಹೊಂದಿರುವ ‘ರಮ್ಮಿ ಆಟ’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಉಮರ್ ಷರೀಫ್ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. </p><p>‘ಮನರಂಜನೆಗೆಂದು ಶುರು ಮಾಡಿದ ಆನ್ಲೈನ್ ಜೂಜಾಟ ಕೆಲವರ ಜೀವನವನ್ನೇ ನಾಶ ಮಾಡುತ್ತಿದೆ. ಅದಕ್ಕೆ ಒಮ್ಮೆ ಅಡಿಕ್ಟ್ ಆದಮೇಲೆ ಅದನ್ನು ಬಿಡಲು ಸಾಧ್ಯವೇ ಆಗದು. ಈ ಆಟದಿಂದ ಕೆಲವೊಮ್ಮೆ ತುಂಬಾ ಲಾಭ ಆಗಬಹುದು. ಜೊತೆಗೆ ಕೆಟ್ಟದ್ದೂ ಆಗಬಹುದು. ಆಟಕ್ಕೆ ಸರ್ಕಾರವೇ ಅನುಮತಿ ನೀಡಿದೆ. ನಟ,ನಟಿಯರು ಇದನ್ನು ಪ್ರಚಾರ ಮಾಡುವುದರಿಂದ ಅಭಿಮಾನಿಗಳೂ ಅದನ್ನೇ ಅನುಸರಿಸುತ್ತಾರೆ. ಇವೆಲ್ಲದರ ಪರಿಣಾಮವನ್ನು ಚಿತ್ರದಲ್ಲಿ ಹೇಳಿದ್ದೇವೆ’ ಎನ್ನುತ್ತಾರೆ ನಿರ್ದೇಶಕರು. </p><p>ನಿರೂಪಕ ರಾಘವ ಸೂರ್ಯ, ವಿನ್ಯಾ ಶೆಟ್ಟಿ, ಸ್ನೇಹರಾವ್ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರಲು ತಂಡ ಆಲೋಚಿಸಿದೆ. </p><p>ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಕಾರ್ತೀಕ್ ಎಸ್. ಛಾಯಾಚಿತ್ರಗ್ರಹಣ, ಪ್ರಭು ಎಸ್.ಆರ್. ಸಂಗೀತವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನ್ಲೈನ್ನಲ್ಲಿ ರಮ್ಮಿ, ಜೂಜಾಟವಾಡಿ ಬೀದಿಗೆ ಬಂದವರು ಅನೇಕರಿದ್ದಾರೆ. ರಮ್ಮಿ ಆಡಬೇಡಿ ಎಂದು ಜಾಗೃತಿ ಮೂಡಿಸುವ ಸಾಕಷ್ಟು ವಿಡಿಯೊಗಳು ಈಗಾಗಲೇ ವೈರಲ್ ಆಗಿವೆ. ಇದೀಗ ಆನ್ಲೈನ್ ರಮ್ಮಿ ಕುರಿತಾದ ಕಥೆ ಹೊಂದಿರುವ ‘ರಮ್ಮಿ ಆಟ’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಉಮರ್ ಷರೀಫ್ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. </p><p>‘ಮನರಂಜನೆಗೆಂದು ಶುರು ಮಾಡಿದ ಆನ್ಲೈನ್ ಜೂಜಾಟ ಕೆಲವರ ಜೀವನವನ್ನೇ ನಾಶ ಮಾಡುತ್ತಿದೆ. ಅದಕ್ಕೆ ಒಮ್ಮೆ ಅಡಿಕ್ಟ್ ಆದಮೇಲೆ ಅದನ್ನು ಬಿಡಲು ಸಾಧ್ಯವೇ ಆಗದು. ಈ ಆಟದಿಂದ ಕೆಲವೊಮ್ಮೆ ತುಂಬಾ ಲಾಭ ಆಗಬಹುದು. ಜೊತೆಗೆ ಕೆಟ್ಟದ್ದೂ ಆಗಬಹುದು. ಆಟಕ್ಕೆ ಸರ್ಕಾರವೇ ಅನುಮತಿ ನೀಡಿದೆ. ನಟ,ನಟಿಯರು ಇದನ್ನು ಪ್ರಚಾರ ಮಾಡುವುದರಿಂದ ಅಭಿಮಾನಿಗಳೂ ಅದನ್ನೇ ಅನುಸರಿಸುತ್ತಾರೆ. ಇವೆಲ್ಲದರ ಪರಿಣಾಮವನ್ನು ಚಿತ್ರದಲ್ಲಿ ಹೇಳಿದ್ದೇವೆ’ ಎನ್ನುತ್ತಾರೆ ನಿರ್ದೇಶಕರು. </p><p>ನಿರೂಪಕ ರಾಘವ ಸೂರ್ಯ, ವಿನ್ಯಾ ಶೆಟ್ಟಿ, ಸ್ನೇಹರಾವ್ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರಲು ತಂಡ ಆಲೋಚಿಸಿದೆ. </p><p>ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಕಾರ್ತೀಕ್ ಎಸ್. ಛಾಯಾಚಿತ್ರಗ್ರಹಣ, ಪ್ರಭು ಎಸ್.ಆರ್. ಸಂಗೀತವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>