‘ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ಅಡಿಬರಹ ಹೊಂದಿರುವ ಚಿತ್ರ ಸೆನ್ಸಾರ್ ಮುಗಿಸಿ ಶೀಘ್ರದಲ್ಲಿ ತೆರೆಗೆ ಬರಲು ಸಿದ್ಧವಿದೆ. ‘ಅವಕಾಶ್-ಆಕೃತಿ ಎರಡು ಪಾತ್ರಗಳ ಸುತ್ತ ಚಿತ್ರವು ಸಾಗುತ್ತದೆ. ಇಬ್ಬರು ಪ್ರೀತಿಸಿರುತ್ತಾರೆ. ಅಮವ್ಯಾಸೆಯ ದಿನ ಯಮಗಂಡ ಕಾಲದಲ್ಲಿ ಮದುವೆಯಾಗಲು ನಿರ್ಧರಿಸಿ, ಒಬ್ಬರನ್ನೊಬ್ಬರು ಅರಿತುಕೊಳ್ಳಲು ಒಂದು ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿಗೆ ಹೋದಾಗ ಏನಾಗುತ್ತದೆ? ಎಂಬುದನ್ನು ಚಿತ್ರದಲ್ಲಿ ನೋಡಬೇಕು. ಊಹಿಸಲಾಗದ ತಿರುವುಗಳಿವೆ. ಕಮರ್ಷಿಯಲ್ ಚಿತ್ರಗಳಿಂದ ಹೊರತಾದ ಕೆಲವು ಸಂಗತಿಗಳಿವೆ’ ಎಂದರು ನಿರ್ದೇಶಕರು.