<p>ಕನ್ನಡದಲ್ಲಿ ಕನ್ನಡ ಚಿತ್ರಗಳಿಗೆಹೊಸ ಒಟಿಟಿ ಆ್ಯಪ್ ಬಂದಿದೆ. ‘ಸಿನಿಬಜಾರ್’ ಅದರ ಹೆಸರು. ಭಾಸ್ಕರ ವೆಂಕಟೇಶ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಈ ಆ್ಯಪ್ನ ಪ್ರವರ್ತಕರು.</p>.<p>‘ಪ್ರತಿ ಸಿನಿಮಾ ವೀಕ್ಷಣೆಗೆ ₹ 25ರಿಂದ 30 ವೆಚ್ಚವಾಗಲಿದೆ. ವೀಕ್ಷಕರ ಪ್ರಮಾಣವೂ ಇದರಲ್ಲೇ ಗೊತ್ತಾಗಲಿದೆ. ಪ್ರದರ್ಶನ, ಧ್ವನಿ ಪರಿಣಾಮಕ್ಕೆ ಸರಿಯಾದ ತಂತ್ರಜ್ಞಾನ ಬಳಸಿದ್ದೇವೆ. ಈ ಆ್ಯಪ್ ಮೂಲಕವೇ ನಿರ್ಮಾಪಕರು ತಮ್ಮ ಚಿತ್ರ ಬಿಡುಗಡೆ ಮಾಡಬಹುದು. ಈಗಾಗಲೇ ಬಿಡುಗಡೆ ಆಗಿರುವ ಚಿತ್ರಗಳೂ ಈಗಾಗಲೇ ಭಂಡಾರದಲ್ಲಿವೆ’ ಎಂದು ಭಾಸ್ಕರ್ ವೆಂಕಟೇಶ್ ಹೇಳಿದರು.</p>.<p>‘ಭಾಸ್ಕರ್ ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡಿದಾಗ ಇದರಿಂದ ನಿರ್ಮಾಪಕರಿಗೆ ಹಾಗೂ ನೋಡುಗರಿಗೆ ಅನುಕೂಲವಿದೆ ಎಂದು ತಿಳಿಯಿತು. ನಾನು ಭಾಸ್ಕರ್ ಅವರ ಜೊತೆ ಈ ಪ್ರಯತ್ನಕ್ಕೆ ಕೈ ಜೋಡಿಸಿದ್ದೇನೆ’ ಎಂದರು ಉಮೇಶ್ ಬಣಕಾರ್.</p>.<p>ಸುಧಾಕರ್ ಅವರು ಈ ಆ್ಯಪನ್ನು ಅಭಿವೃದ್ಧಿಪಡಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಿ.ಆರ್.ಜೈರಾಜ್, ಉಪಾಧ್ಯಕ್ಷ ನಾಗಣ್ಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ನಟ ಶ್ರೀನಗರ ಕಿಟ್ಟಿ, ನಿರ್ದೇಶಕರಾದ ರವಿಶ್ರೀವತ್ಸ, ಗಿರಿರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡದಲ್ಲಿ ಕನ್ನಡ ಚಿತ್ರಗಳಿಗೆಹೊಸ ಒಟಿಟಿ ಆ್ಯಪ್ ಬಂದಿದೆ. ‘ಸಿನಿಬಜಾರ್’ ಅದರ ಹೆಸರು. ಭಾಸ್ಕರ ವೆಂಕಟೇಶ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಈ ಆ್ಯಪ್ನ ಪ್ರವರ್ತಕರು.</p>.<p>‘ಪ್ರತಿ ಸಿನಿಮಾ ವೀಕ್ಷಣೆಗೆ ₹ 25ರಿಂದ 30 ವೆಚ್ಚವಾಗಲಿದೆ. ವೀಕ್ಷಕರ ಪ್ರಮಾಣವೂ ಇದರಲ್ಲೇ ಗೊತ್ತಾಗಲಿದೆ. ಪ್ರದರ್ಶನ, ಧ್ವನಿ ಪರಿಣಾಮಕ್ಕೆ ಸರಿಯಾದ ತಂತ್ರಜ್ಞಾನ ಬಳಸಿದ್ದೇವೆ. ಈ ಆ್ಯಪ್ ಮೂಲಕವೇ ನಿರ್ಮಾಪಕರು ತಮ್ಮ ಚಿತ್ರ ಬಿಡುಗಡೆ ಮಾಡಬಹುದು. ಈಗಾಗಲೇ ಬಿಡುಗಡೆ ಆಗಿರುವ ಚಿತ್ರಗಳೂ ಈಗಾಗಲೇ ಭಂಡಾರದಲ್ಲಿವೆ’ ಎಂದು ಭಾಸ್ಕರ್ ವೆಂಕಟೇಶ್ ಹೇಳಿದರು.</p>.<p>‘ಭಾಸ್ಕರ್ ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡಿದಾಗ ಇದರಿಂದ ನಿರ್ಮಾಪಕರಿಗೆ ಹಾಗೂ ನೋಡುಗರಿಗೆ ಅನುಕೂಲವಿದೆ ಎಂದು ತಿಳಿಯಿತು. ನಾನು ಭಾಸ್ಕರ್ ಅವರ ಜೊತೆ ಈ ಪ್ರಯತ್ನಕ್ಕೆ ಕೈ ಜೋಡಿಸಿದ್ದೇನೆ’ ಎಂದರು ಉಮೇಶ್ ಬಣಕಾರ್.</p>.<p>ಸುಧಾಕರ್ ಅವರು ಈ ಆ್ಯಪನ್ನು ಅಭಿವೃದ್ಧಿಪಡಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಿ.ಆರ್.ಜೈರಾಜ್, ಉಪಾಧ್ಯಕ್ಷ ನಾಗಣ್ಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ನಟ ಶ್ರೀನಗರ ಕಿಟ್ಟಿ, ನಿರ್ದೇಶಕರಾದ ರವಿಶ್ರೀವತ್ಸ, ಗಿರಿರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>