ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಪ್ರಸನ್ನ ಶೆಟ್ಟಿ ಬೈಲೂರು ತಾರಾಗಣದಲ್ಲಿದ್ದಾರೆ. ರೂಪೇಶ್ ಶೆಟ್ಟಿ ಜತೆ ರಾಕೇಶ್ ಕದ್ರಿ ನಿರ್ದೇಶನಕ್ಕೆ ಜೊತೆಯಾಗಿದ್ದಾರೆ. ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ರಾಹುಲ್ ವಶಿಷ್ಠ ಸಂಕಲನ ಈ ಚಿತ್ರಕ್ಕಿದೆ. ‘ಕೋವಿಡ್ ಪರಿಸ್ಥಿತಿ ತಿಳಿಯಾಗಿ ನಿರ್ಬಂಧಗಳು ಸಡಿಲವಾದ ಬಳಿಕ ಚಿತ್ರ ಬಿಡುಗಡೆ ಮಾಡುತ್ತೇವೆ’ ಎಂದು ರೂಪೇಶ್ ಶೆಟ್ಟಿ ತಿಳಿಸಿದರು.