ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ, ಚಿತ್ರಮಂದಿರಗಳಲ್ಲಿ ಈ ಹಿಂದೆ ಇದ್ದಂತೆ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶದ ನಿರ್ಬಂಧವನ್ನು ಸರ್ಕಾರ ಮತ್ತೆ ಜಾರಿಗೆ ತರುವುದೇ ಎನ್ನುವ ಆತಂಕ ಚಿತ್ರರಂಗಕ್ಕೆ ಎದುರಾಗಿತ್ತು. ಆದರೆ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ.