<p><strong>ಬೆಂಗಳೂರು:</strong> ’ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ಚಿತ್ರನಗರಿಯನ್ನು (ಫಿಲಂ ಸಿಟಿ) ನಿರ್ಮಾಣ ಮಾಡಲಾಗುವುದು. ಕೋವಿಡ್ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಪುನಶ್ಚೇತನಕ್ಕೆ ಸರ್ವ ನೆರವು ನೀಡಲಾಗುವುದು‘ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಗುರುವಾರ ಇಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಭೇಟಿಯಾದ ಕನ್ನಡ ಚಿತ್ರರಂಗದ ನಿಯೋಗದ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ರೋರಿಚ್ ಎಸ್ಟೇಟಿನಲ್ಲಿ ಪರಿಸರಾ ತ್ಮಕಸಮಸ್ಯೆಗಳು ಎದುರಾದವು. ಹೀಗಾಗಿ ಅಲ್ಲಿ ಈ ಯೋಜನೆ ಅನುಷ್ಠಾನ ಸಾಧ್ಯವಾಗುತ್ತಿಲ್ಲ‘ ಎಂದರು.</p>.<p>’ಹೆಸರಘಟ್ಟದಲ್ಲಿ ಪಶು ಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು, ಅದರಲ್ಲಿ 150 ಎಕರೆಯನ್ನು ಫಿಲಂ ಸಿಟಿ ನಿರ್ಮಾಣಕ್ಕೆ ನೀಡಲಾಗುವುದು. ಅಲ್ಲಿ ಸಂಪರ್ಕ ರಸ್ತೆಯೊಂದನ್ನು ನಿರ್ಮಿಸಿ ಆ ಜಾಗವನ್ನುಫಿಲಂ ಸಿಟಿಗೆ ಹಸ್ತಾಂತರ ಮಾಡಲಾಗುವುದು.ಈಗಾಗಲೇ ಇದಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ತ್ವರಿತವಾಗಿ ಫಿಲಂ ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು‘ ಎಂದರು.</p>.<p>’ಕೋವಿಡ್ ಕಾರಣದಿಂದ ಚಿತ್ರರಂಗ ಎದುರಿಸುತ್ತಿರವ ಸಮಸ್ಯೆಗಳ ಬಗ್ಗೆ ಶಿವರಾಜ್ ಕುಮಾರ್ ಅವರ ಜತೆ ವಿವರವಾಗಿ ಚರ್ಚಿಸಲಾಗಿದೆ. ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ನಡೆಸಲಾಗುವುದು‘ ಎಂದರು.</p>.<p>’ಚಿತ್ರರಂಗದ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆಯ ಅಡಿಗೆ ತಂದು ಸರ್ಕಾರದ ಸವಲತ್ತುಗಳು ಮಾಡಲಾಗುವುದು. ಪ್ರದರ್ಶಕ ವಲಯದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ಕಾರ್ಮಿಕರಿಗೂ ಸರ್ಕಾರ ಸಹಾಯಹಸ್ತ ಚಾಚಲಿದೆ‘ ಎಂದರು.</p>.<p><strong>ಎಸ್ಒಪಿಯಲ್ಲಿ ರಿಯಾಯಿತಿ:</strong> ಕೋವಿಡ್ ಕಾರಣಕ್ಕೆ ಮಾರ್ಗದರ್ಶಿ (ಎಸ್ಒಪಿ) ಜಾರಿಯಲ್ಲಿದೆ. ಕಲಾವಿದರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಸ್ವಲ್ಪ ಮಟ್ಟಿಗೆ ರಿಯಾಯಿತಿ ನೀಡಬೇಕು ಎಂದು ಚಿತ್ರರಂಗದ ಗಣ್ಯರು ವಿನಂತಿಸಿದ್ದಾರೆ. ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>’ಈಗಿನ ಎಸ್ಒಪಿ ಪ್ರಕಾರ ಶೂಟಿಂಗ್ ಮತ್ತಿತರೆ ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ 40 ಜನ ಮಾತ್ರ ಇರಬೇಕು. ಇದರಿಂದ ಅನೇಕ ಕಲಾವಿದರು ಮತ್ತು ಕಾರ್ಮಿಕರಿಗೆ ಕಷ್ಟವಾಗುತ್ತಿದೆ. ಈ ಮಿತಿಯನ್ನು ಸಡಿಲ ಮಾಡುವಂತೆ ಕೇಳಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು‘ ಎಂದರು.</p>.<p>ಶಿವರಾಜ್ ಕುಮಾರ್ ಮಾತನಾಡಿ, ’ಕೋವಿಡ್ ಕಾರಣದಿಂದ ಚಿತ್ರರಂಗ ಕಂಗೆಟ್ಟಿದೆ. ಸರ್ಕಾರವೇ ಚಿತ್ರರಂಗವನ್ನು ರಕ್ಷಿಸಬೇಕು. ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಮುಂದಿನ ವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ’ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ಚಿತ್ರನಗರಿಯನ್ನು (ಫಿಲಂ ಸಿಟಿ) ನಿರ್ಮಾಣ ಮಾಡಲಾಗುವುದು. ಕೋವಿಡ್ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಪುನಶ್ಚೇತನಕ್ಕೆ ಸರ್ವ ನೆರವು ನೀಡಲಾಗುವುದು‘ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಗುರುವಾರ ಇಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಭೇಟಿಯಾದ ಕನ್ನಡ ಚಿತ್ರರಂಗದ ನಿಯೋಗದ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ರೋರಿಚ್ ಎಸ್ಟೇಟಿನಲ್ಲಿ ಪರಿಸರಾ ತ್ಮಕಸಮಸ್ಯೆಗಳು ಎದುರಾದವು. ಹೀಗಾಗಿ ಅಲ್ಲಿ ಈ ಯೋಜನೆ ಅನುಷ್ಠಾನ ಸಾಧ್ಯವಾಗುತ್ತಿಲ್ಲ‘ ಎಂದರು.</p>.<p>’ಹೆಸರಘಟ್ಟದಲ್ಲಿ ಪಶು ಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು, ಅದರಲ್ಲಿ 150 ಎಕರೆಯನ್ನು ಫಿಲಂ ಸಿಟಿ ನಿರ್ಮಾಣಕ್ಕೆ ನೀಡಲಾಗುವುದು. ಅಲ್ಲಿ ಸಂಪರ್ಕ ರಸ್ತೆಯೊಂದನ್ನು ನಿರ್ಮಿಸಿ ಆ ಜಾಗವನ್ನುಫಿಲಂ ಸಿಟಿಗೆ ಹಸ್ತಾಂತರ ಮಾಡಲಾಗುವುದು.ಈಗಾಗಲೇ ಇದಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ತ್ವರಿತವಾಗಿ ಫಿಲಂ ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು‘ ಎಂದರು.</p>.<p>’ಕೋವಿಡ್ ಕಾರಣದಿಂದ ಚಿತ್ರರಂಗ ಎದುರಿಸುತ್ತಿರವ ಸಮಸ್ಯೆಗಳ ಬಗ್ಗೆ ಶಿವರಾಜ್ ಕುಮಾರ್ ಅವರ ಜತೆ ವಿವರವಾಗಿ ಚರ್ಚಿಸಲಾಗಿದೆ. ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ನಡೆಸಲಾಗುವುದು‘ ಎಂದರು.</p>.<p>’ಚಿತ್ರರಂಗದ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆಯ ಅಡಿಗೆ ತಂದು ಸರ್ಕಾರದ ಸವಲತ್ತುಗಳು ಮಾಡಲಾಗುವುದು. ಪ್ರದರ್ಶಕ ವಲಯದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ಕಾರ್ಮಿಕರಿಗೂ ಸರ್ಕಾರ ಸಹಾಯಹಸ್ತ ಚಾಚಲಿದೆ‘ ಎಂದರು.</p>.<p><strong>ಎಸ್ಒಪಿಯಲ್ಲಿ ರಿಯಾಯಿತಿ:</strong> ಕೋವಿಡ್ ಕಾರಣಕ್ಕೆ ಮಾರ್ಗದರ್ಶಿ (ಎಸ್ಒಪಿ) ಜಾರಿಯಲ್ಲಿದೆ. ಕಲಾವಿದರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಸ್ವಲ್ಪ ಮಟ್ಟಿಗೆ ರಿಯಾಯಿತಿ ನೀಡಬೇಕು ಎಂದು ಚಿತ್ರರಂಗದ ಗಣ್ಯರು ವಿನಂತಿಸಿದ್ದಾರೆ. ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>’ಈಗಿನ ಎಸ್ಒಪಿ ಪ್ರಕಾರ ಶೂಟಿಂಗ್ ಮತ್ತಿತರೆ ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ 40 ಜನ ಮಾತ್ರ ಇರಬೇಕು. ಇದರಿಂದ ಅನೇಕ ಕಲಾವಿದರು ಮತ್ತು ಕಾರ್ಮಿಕರಿಗೆ ಕಷ್ಟವಾಗುತ್ತಿದೆ. ಈ ಮಿತಿಯನ್ನು ಸಡಿಲ ಮಾಡುವಂತೆ ಕೇಳಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು‘ ಎಂದರು.</p>.<p>ಶಿವರಾಜ್ ಕುಮಾರ್ ಮಾತನಾಡಿ, ’ಕೋವಿಡ್ ಕಾರಣದಿಂದ ಚಿತ್ರರಂಗ ಕಂಗೆಟ್ಟಿದೆ. ಸರ್ಕಾರವೇ ಚಿತ್ರರಂಗವನ್ನು ರಕ್ಷಿಸಬೇಕು. ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಮುಂದಿನ ವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>