<p>ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ‘ಚೈಲ್ಡು’ ಚಿತ್ರದ ಶೀರ್ಷಿಕೆ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಆ್ಯಕ್ಷನ್ ಕಥೆಯನ್ನು ಹೊಂದಿರುವ ಚಿತ್ರಕ್ಕೆ ಪ್ರಕಾಶ್ ಹೆಬ್ಬಾಳ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. </p>.<p>‘ಹಫ್ತಾ’ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಆ್ಯಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್– ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳನ್ನೊಳಗೊಂಡಿದೆ. ಚಿತ್ರೀಕರಣ ಪ್ರಾರಂಭಗೊಂಡಿದೆ. ತಾರಾ ಅನುರಾಧಾ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿರುತ್ತಾರೆ. ರಂಗಾಯಣ ರಘು ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುತ್ತೇವೆ’ ಎಂದರು ನಿರ್ದೇಶಕ.</p>.<p>ಕಮಲ ಫಿಲ್ಮ್ಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ. ಬಂಡವಾಳ ಹೂಡುತ್ತಿದ್ದಾರೆ. ‘ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ. ನಿರ್ದೇಶಕ ಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಅದಕ್ಕಿಂತ ನೀವು ಈ ಚಿತ್ರದ ನಾಯಕ ಅಂತ ಹೇಳಿದ್ದು ಖುಷಿಯಾಯಿತು. ನನಗೆ ತಕ್ಕಂತಹ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ. ರೌಡಿಸಂ ಚಿತ್ರವಾದರೂ, ಲವ್ ಕೂಡ ಇರುತ್ತದೆ. ನನ್ನ ಲುಕ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದರು ಸುಧೀ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ‘ಚೈಲ್ಡು’ ಚಿತ್ರದ ಶೀರ್ಷಿಕೆ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಆ್ಯಕ್ಷನ್ ಕಥೆಯನ್ನು ಹೊಂದಿರುವ ಚಿತ್ರಕ್ಕೆ ಪ್ರಕಾಶ್ ಹೆಬ್ಬಾಳ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. </p>.<p>‘ಹಫ್ತಾ’ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಆ್ಯಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್– ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳನ್ನೊಳಗೊಂಡಿದೆ. ಚಿತ್ರೀಕರಣ ಪ್ರಾರಂಭಗೊಂಡಿದೆ. ತಾರಾ ಅನುರಾಧಾ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿರುತ್ತಾರೆ. ರಂಗಾಯಣ ರಘು ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುತ್ತೇವೆ’ ಎಂದರು ನಿರ್ದೇಶಕ.</p>.<p>ಕಮಲ ಫಿಲ್ಮ್ಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ. ಬಂಡವಾಳ ಹೂಡುತ್ತಿದ್ದಾರೆ. ‘ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ. ನಿರ್ದೇಶಕ ಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಅದಕ್ಕಿಂತ ನೀವು ಈ ಚಿತ್ರದ ನಾಯಕ ಅಂತ ಹೇಳಿದ್ದು ಖುಷಿಯಾಯಿತು. ನನಗೆ ತಕ್ಕಂತಹ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ. ರೌಡಿಸಂ ಚಿತ್ರವಾದರೂ, ಲವ್ ಕೂಡ ಇರುತ್ತದೆ. ನನ್ನ ಲುಕ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದರು ಸುಧೀ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>