<p><strong>ಬೆಂಗಳೂರು</strong>: ಸರ್ಕಾರ ಯಾವಾಗಲೂ ಚಿತ್ರರಂಗದ ಜೊತೆಗಿದೆ. ಚಲನಚಿತ್ರರಂಗಕ್ಕೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯ ಒದಗಿಸಲು ಬದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ಕೆಎಫ್ಸಿಸಿ ಆವರಣದಲ್ಲಿ ಚಿತ್ರರಂಗದವರಿಗಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಬದಲಾದ ಜೀವನಶೈಲಿ, ಆಹಾರ ಅಸಮತೋಲನದಿಂದ ಅತಿ ಚಿಕ್ಕವಯಸ್ಸಿನಲ್ಲೆ ರಕ್ತದೊತ್ತಡ, ಮಧುಮೇಹ ಬರುತ್ತಿದೆ. ಮಾಲಿನ್ಯದಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ. ಇದರ ಬಗ್ಗೆ ಜಾಗೃತಿ ಅಗತ್ಯ. ಹೀಗಾಗಿ, ಪ್ರತಿ ವರ್ಷ ಇಂತಹ ಆರೋಗ್ಯ ಶಿಬಿರ ಆಯೋಜಿಸುವುದು ಅತ್ಯಗತ್ಯ’ ಎಂದು ಅವರು ತಿಳಿಸಿದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಚಿತ್ರರಂಗದ ಯಾವುದೇ ಸಮಸ್ಯೆಗಳಿದ್ದರೂ ನಮ್ಮ ಬಳಿ ತೆಗೆದುಕೊಂಡು ಬನ್ನಿ. ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಪರಿಹಾರ ಒದಗಿಸುತ್ತೇವೆ. ಸರ್ಕಾರ ಸದಾ ಚಿತ್ರರಂಗದ ಪರವಾಗಿದೆ’ ಎಂದರು.</p>.<p>ಚಿತ್ರರಂಗದಲ್ಲಿ ಸೇವೆ ಸಲ್ಲಿಸುವ ಕುಟುಂಬಗಳ ಆರೋಗ್ಯ ಸಂರಕ್ಷಣೆಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ನಟಿಯರಾದ ಪೂಜಾಗಾಂಧಿ, ರಾಗಿಣಿ ದ್ವಿವೇದಿ, ನೇಹಾ ಸಕ್ಸೇನಾ ಅತಿಥಿಗಳಾಗಿದ್ದರು.</p>.<p>ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರ ಕುಟುಂಬದ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಸ್ವಯಂಪ್ರೇರಿತ ರಕ್ತದಾನ ಶಿಬಿರ, ನೇತ್ರದಾನ ನೋಂದಣಿ ಮಾಡಲಾಯಿತು.</p>.<p>ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಉಪಾಧ್ಯಕ್ಷರಾದ ಪ್ರಮೀಳಾ ಜೋಷಾಯ್, ವೆಂಕಟೇಶ್, ಎಂ.ನರಸಿಂಹಲು, ಗೌರವ ಕಾರ್ಯದರ್ಶಿಗಳಾದ ಭಾ.ಮ.ಗಿರೀಶ್, ಕರಿಸುಬ್ಬು, ಆರ್.ಸುಂದರರಾಜ್, ಖಜಾಂಚಿ ಜಯಸಿಂಹ ಮುಸುರಿ ಈ ಸಂದರ್ಭದಲ್ಲಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರ ಯಾವಾಗಲೂ ಚಿತ್ರರಂಗದ ಜೊತೆಗಿದೆ. ಚಲನಚಿತ್ರರಂಗಕ್ಕೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯ ಒದಗಿಸಲು ಬದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ಕೆಎಫ್ಸಿಸಿ ಆವರಣದಲ್ಲಿ ಚಿತ್ರರಂಗದವರಿಗಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಬದಲಾದ ಜೀವನಶೈಲಿ, ಆಹಾರ ಅಸಮತೋಲನದಿಂದ ಅತಿ ಚಿಕ್ಕವಯಸ್ಸಿನಲ್ಲೆ ರಕ್ತದೊತ್ತಡ, ಮಧುಮೇಹ ಬರುತ್ತಿದೆ. ಮಾಲಿನ್ಯದಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ. ಇದರ ಬಗ್ಗೆ ಜಾಗೃತಿ ಅಗತ್ಯ. ಹೀಗಾಗಿ, ಪ್ರತಿ ವರ್ಷ ಇಂತಹ ಆರೋಗ್ಯ ಶಿಬಿರ ಆಯೋಜಿಸುವುದು ಅತ್ಯಗತ್ಯ’ ಎಂದು ಅವರು ತಿಳಿಸಿದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಚಿತ್ರರಂಗದ ಯಾವುದೇ ಸಮಸ್ಯೆಗಳಿದ್ದರೂ ನಮ್ಮ ಬಳಿ ತೆಗೆದುಕೊಂಡು ಬನ್ನಿ. ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಪರಿಹಾರ ಒದಗಿಸುತ್ತೇವೆ. ಸರ್ಕಾರ ಸದಾ ಚಿತ್ರರಂಗದ ಪರವಾಗಿದೆ’ ಎಂದರು.</p>.<p>ಚಿತ್ರರಂಗದಲ್ಲಿ ಸೇವೆ ಸಲ್ಲಿಸುವ ಕುಟುಂಬಗಳ ಆರೋಗ್ಯ ಸಂರಕ್ಷಣೆಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ನಟಿಯರಾದ ಪೂಜಾಗಾಂಧಿ, ರಾಗಿಣಿ ದ್ವಿವೇದಿ, ನೇಹಾ ಸಕ್ಸೇನಾ ಅತಿಥಿಗಳಾಗಿದ್ದರು.</p>.<p>ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರ ಕುಟುಂಬದ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಸ್ವಯಂಪ್ರೇರಿತ ರಕ್ತದಾನ ಶಿಬಿರ, ನೇತ್ರದಾನ ನೋಂದಣಿ ಮಾಡಲಾಯಿತು.</p>.<p>ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಉಪಾಧ್ಯಕ್ಷರಾದ ಪ್ರಮೀಳಾ ಜೋಷಾಯ್, ವೆಂಕಟೇಶ್, ಎಂ.ನರಸಿಂಹಲು, ಗೌರವ ಕಾರ್ಯದರ್ಶಿಗಳಾದ ಭಾ.ಮ.ಗಿರೀಶ್, ಕರಿಸುಬ್ಬು, ಆರ್.ಸುಂದರರಾಜ್, ಖಜಾಂಚಿ ಜಯಸಿಂಹ ಮುಸುರಿ ಈ ಸಂದರ್ಭದಲ್ಲಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>