ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ರಚಿತಾ ರಾಮ್‌ ವಿರುದ್ಧ ದೂರು

Last Updated 22 ಜನವರಿ 2023, 14:38 IST
ಅಕ್ಷರ ಗಾತ್ರ

ಭಾರತೀನಗರ: ನಟ ದರ್ಶನ್‌ ನಟನೆಯ ಕ್ರಾಂತಿ ಸಿನಿಮಾದ ಪ್ರಚಾರದ ಭರದಲ್ಲಿ ಚಿತ್ರ ನಟಿ ರಚಿತಾ ರಾಮ್‌ ಗಣರಾಜ್ಯೋತ್ಸವದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ವೈಜ್ಞಾನಿಕ ಪರಿಷತ್‌ ಸದಸ್ಯರು ಭಾನುವಾರ ಭಾರತೀನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಜ.26ರಂದು ನೀವು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದಿರಿ. ಆದರೆ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಆಚರಿಸಿ’ ಎಂದು ಹೇಳುವ ಮೂಲಕ ದೇಶಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ದೇಶದಲ್ಲಿನ ಸುಭದ್ರತೆಗೆ ಕಲ್ಪಿಸುತ್ತಿರುವ ಸಂವಿಧಾನಕ್ಕೆ ಗೌರವ ನೀಡುವುದು ಎಲ್ಲರ ಕರ್ತವ್ಯ ಆದರೆ ರಚಿತಾ ರಾಮ್‌ ಅವರು ಸಂವಿಧಾನಕ್ಕೂ ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೇಶದ ಬಗ್ಗೆ, ಸಂವಿಧಾನದ ಬಗ್ಗೆ, ಜ.26ರ ಮಹತ್ವದ ಬಗ್ಗೆ ಗೌರವ ಇಟ್ಟಕೊಳ್ಳದ ರಚಿತಾ ರಾಮ್‌ ವಿರುದ್ದ ಕ್ರಮ ಜರುಗಿಸಬೇಕು ಎಂದು ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಲಿಂಗಯ್ಯ, ಗೌರವಾಧ್ಯಕ್ಷ ಎಂ.ಸಿ.ಬಸವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಸಿ.ಮಹೇಂದ್ರ, ಉಪಾಧ್ಯಕ್ಷ ಶಿವರಾಜು ದೂರಿನಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT