'ಡಾ.ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರನಾಗ್, ಅನಂತನಾಗ್ ಮುಂತಾದ ನೂರಾರು ನಟರು ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಮಟ್ಟದಲ್ಲಿ ಗೌರವ ತಂದುಕೊಟ್ಟು ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಆದರೆ ದರ್ಶನ್ ಹಾಗೂ ಇಂದ್ರಜಿತ್ ಅವರು ತಮ್ಮ ಕೀಳುಮಟ್ಟದ ಮಾತುಗಳಿಂದ ಕರ್ನಾಟಕದ ಗೌರವವನ್ನು ಹಾಳು ಮಾಡಿದ್ದಾರೆ. ಆದ್ದರಿಂದ ಈ ಕೂಡಲೇ ಇಬ್ಬರನ್ನು ಐದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿಡಬೇಕು ಹಾಗೂ ಚಿತ್ರರಂಗದ ಯಾವುದೇ ವಿಭಾಗದಲ್ಲಿ ಭಾಗವಹಿಸಲು ಬಿಡಬಾರದು. ಇವರ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.