ಕಂಗನಾ ಹೇಳಿಕೆ ವಿಚಾರವಾಗಿ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ‘ಕಂಗನಾ ಅವರ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಅನುಮೋದಿಸುತ್ತಾರೆಯೇ? ಈ ಕುರಿತು ತಮ್ಮ ಮೌನವನ್ನು ಮುರಿದು ದೇಶಕ್ಕೆ ತಿಳಿಸಲಿ. ಇಲ್ಲದಿದ್ದಲ್ಲಿ ಅಂತಹವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ‘ ಎಂದು ಟ್ವೀಟ್ ಮಾಡಿದ್ದಾರೆ.