ʼಪೈರಸಿ ಇಂದು ನಿನ್ನೆಯ ಸಮಸ್ಯೆ ಅಲ್ಲ. ಕ್ಯಾಸೆಟ್, ಸಿಡಿ, ಡಿವಿಡಿಗಳ ಕಾಲದಿಂದಲೂ ಇತ್ತು. ಈಗ ಡಿಜಿಟಲ್ ವ್ಯವಸ್ಥೆ ಬಂದ ಮೇಲೆ ಕ್ಷಣದಲ್ಲೇ ಕೋಟ್ಯಂತರ ಪ್ರತಿಗಳನ್ನು ಮಾಡಬಹುದು. ಮೈಸೂರು ಹಾಗೂ ಬೆಂಗಳೂರಿನಲ್ಲಿ ನೇರವಾಗಿ ದಾಳಿ ನಡೆಸಿ ಪೈರಸಿಕೋರರನ್ನು ಪೊಲೀಸರಿಗೆ ಹಿಡಿದುಕೊಟ್ಟೆವು. ಆದರೂ ಅವರ ವಿರುದ್ಧ ಗೂಂಡಾ ಕಾಯ್ದೆಯ ಅಡಿ ಸೂಕ್ತ ಕಲಂಗಳನ್ನು ಅನ್ವಯಿಸಿ ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಮಾಡಲಿಲ್ಲ’ ಎಂದರು.