ನಟಿ ಆಲಿಯಾ ಭಟ್ ತೆಲುಗಿನಲ್ಲಿ, ನಟರಾದ ರಾಮ್ ಚರಣ್ ತಮಿಳಿನಲ್ಲಿ, ಜೂನಿಯರ್ ಎನ್ಟಿಆರ್ ಕನ್ನಡದಲ್ಲಿ, ರಾಜಮೌಳಿ ಮಲಯಾಳಂನಲ್ಲಿ ಹಾಗೂ ಅಜಯ್ ದೇವಗನ್ ಹಿಂದಿ ಭಾಷೆಯಲ್ಲಿ ಕೋವಿಡ್ ಜಾಗೃತಿ ಮೂಡಿಸಿದ್ದಾರೆ. ‘ಎರಡನೇ ಅಲೆಯಲ್ಲಿ ದೇಶದಾದ್ಯಂತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ’ ಎಂದು ಸರಾಗವಾಗಿ ತೆಲುಗಿನಲ್ಲಿ ಮಾತನಾಡಿರುವ ಆಲಿಯಾ ಭಟ್, ಮಾಸ್ಕ್ ಧರಿಸಿ ಹಾಗೂ ಲಸಿಕೆ ಹಾಕಿಸಿಕೊಳ್ಳಲು ಕರೆ ನೀಡಿದ್ದಾರೆ.