ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಭಾನುವಾರ ತಮ್ಮ ನಿವಾಸ ಜಲ್ಸಾದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಗ್ ಬಿ ಈ ತೀರ್ಮಾನ ಕೈಗೊಂಡಿದ್ದಾರೆ.
ತಮ್ಮ ನಿರ್ಧಾರವನ್ನು ಟ್ವೀಟ್ ಮೂಲಕ ತಿಳಿಸಿರುವ ಬಚ್ಚನ್, ಅಭಿಮಾನಿಗಳು ಭಾನುವಾರದ ಭೇಟಿಗಾಗಿ 'ಜಲ್ಸಾ'ದ ಗೇಟ್ ಬಳಿ ಬರಬೇಡಿ. ನಾನು ಬರುವುದಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ, ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.
T 3470 - To all Ef and well wishers an earnest request !PLEASE DO NOT COME TO JALSA GATE TODAY .. SUNDAY MEET am not going to come ! Take PRECAUTIONS .. be safe Sunday का दर्शन Jalsa पे cancel है , कृपया कोई वहाँ जमा ना हों आज श्याम को । सुरक्षित रहें🙏🙏🙏 pic.twitter.com/USm4kZBEYo
ಮುಂಬೈಯಲ್ಲಿರುವ ತಮ್ಮ ನಿವಾಸದಲ್ಲಿ ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ಹಲವಾರು ವರ್ಷದಿಂದ ಬಚ್ಚನ್ ನಡೆಸಿಕೊಂಡು ಬರುತ್ತಿದ್ದಾರೆ. ಮನೆಯ ಮಹಡಿಗೆ ಬಂದು ಅಮಿತಾಬ್ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಆ ಭಾನುವಾರತಮ್ಮ ಪ್ರೀತಿಯ ನಟನನ್ನು ಕಾಣಲು ಅಭಿಮಾನಿಗಳ ಸಮೂಹವೇ ಇಲ್ಲಿ ಸೇರುತ್ತದೆ.
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಇಲ್ಲಿಯವರಿಗೆ 93 ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ವೈರಸ್ನ್ನು ಅಧಿಸೂಚಿತ ವಿಪತ್ತು ಎಂದು ಘೋಷಿಸಿರುವ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರಿಗೆ ಹೇಳಿದೆ.