ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಮುಂಜಾಗ್ರತೆ: ಅಭಿಮಾನಿಗಳನ್ನು ಭಾನುವಾರ ಭೇಟಿ ಮಾಡುವುದಿಲ್ಲ ಎಂದ ಬಿಗ್ ಬಿ

Last Updated 15 ಮಾರ್ಚ್ 2020, 7:03 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಭಾನುವಾರ ತಮ್ಮ ನಿವಾಸ ಜಲ್ಸಾದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಗ್ ಬಿ ಈ ತೀರ್ಮಾನ ಕೈಗೊಂಡಿದ್ದಾರೆ.

ತಮ್ಮ ನಿರ್ಧಾರವನ್ನು ಟ್ವೀಟ್ ಮೂಲಕ ತಿಳಿಸಿರುವ ಬಚ್ಚನ್, ಅಭಿಮಾನಿಗಳು ಭಾನುವಾರದ ಭೇಟಿಗಾಗಿ 'ಜಲ್ಸಾ'ದ ಗೇಟ್ ಬಳಿ ಬರಬೇಡಿ. ನಾನು ಬರುವುದಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ, ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ಮುಂಬೈಯಲ್ಲಿರುವ ತಮ್ಮ ನಿವಾಸದಲ್ಲಿ ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ಹಲವಾರು ವರ್ಷದಿಂದ ಬಚ್ಚನ್ ನಡೆಸಿಕೊಂಡು ಬರುತ್ತಿದ್ದಾರೆ. ಮನೆಯ ಮಹಡಿಗೆ ಬಂದು ಅಮಿತಾಬ್ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಆ ಭಾನುವಾರತಮ್ಮ ಪ್ರೀತಿಯ ನಟನನ್ನು ಕಾಣಲು ಅಭಿಮಾನಿಗಳ ಸಮೂಹವೇ ಇಲ್ಲಿ ಸೇರುತ್ತದೆ.

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಇಲ್ಲಿಯವರಿಗೆ 93 ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ವೈರಸ್‌ನ್ನು ಅಧಿಸೂಚಿತ ವಿಪತ್ತು ಎಂದು ಘೋಷಿಸಿರುವ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರಿಗೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT