ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಚಿತ್ರೀಕರಣ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ಕಷ್ಟದಲ್ಲಿರುವ ಚಿತ್ರ ಕಾರ್ಮಿಕರಿಗಾಗಿ ನಟ ನಿಖಿಲ್ ಕುಮಾರಸ್ವಾಮಿ ಅವರು ₹ 37 ಲಕ್ಷ ದೇಣಿಗೆ ನೀಡಿದ್ದಾರೆ.
ಚಿತ್ರರಂಗದಲ್ಲಿ ದುಡಿಯುತ್ತಿರುವ 20ಕ್ಕೂ ಅಧಿಕ ಕಾರ್ಮಿಕ ಸಂಘಟನೆಗಳ ಸದಸ್ಯರಿಗೆ ಈ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಿ ಅವರ ಬ್ಯಾಂಕ್ ಖಾತೆಗಳಿಗೆ ಹಾಕಲಾಗುತ್ತದೆ. ಈ ದೇಣಿಗೆಯಲ್ಲಿ ₹ 32 ಲಕ್ಷ ಚಲನಚಿತ್ರ ಕಾರ್ಮಿಕರಿಗೆ ಹಾಗೂ ₹ 5 ಲಕ್ಷ ಕಿರುತೆರೆ ಕಲಾವಿದರಿಗೆ ಸಂದಾಯವಾಗಲಿದೆ.
ತಂದೆ ಎಚ್.ಡಿ.ಕುಮಾರಸ್ವಾಮಿ ಅವರ ಸಲಹೆಯಂತೆ ನಿಖಿಲ್ ಈ ದೇಣಿಗೆ ನೀಡಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ಚಲನಚಿತ್ರ ಕಾರ್ಮಿಕರ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್ ಅವರಿಗೆ ಈ ಕುರಿತ ಚೆಕ್ ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.