<p><strong>ಹೈದರಾಬಾದ್</strong>: ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರಿಗೆ ವಿಧಿಸಿದ್ದ ಕಠಿಣ ಜಾಮೀನು ಷರತ್ತುಗಳನ್ನು ಸಡಿಲಿಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. </p>.<p>ಪ್ರತಿ ಭಾನುವಾರ ಅಲ್ಲು ಅರ್ಜುನ್ ತನಿಖಾಧಿಕಾರಿಗಳ ಎದುರು ಹಾಜರಾಗಬೇಕೆಂಬ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಅಗತ್ಯವಿದ್ದಾಗ ಚಿಕ್ಕಡಪಳ್ಳಿ ಪೊಲೀಸ್ ಠಾಣೆ ಮುಖ್ಯಸ್ಥರ ಎದುರು ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ.</p>.<p>ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೆ ತಮ್ಮ ಪ್ರಯಾಣದ ವೇಳಾಪಟ್ಟಿ ಹಾಗೂ ಆಯಾ ದೇಶದಲ್ಲಿ ಅವರು ತಂಗುವ ಸ್ಥಳದ ವಿವರಗಳನ್ನು ಅಲ್ಲು ಅರ್ಜುನ್ ಅವರು ಠಾಣೆ ಮುಖ್ಯಸ್ಥರಿಗೆ ಸಲ್ಲಿಸಬೇಕು. ಉಳಿದ ಜಾಮೀನು ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ. </p>.<p>ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಅಲ್ಲು ಅರ್ಜುನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. </p>.<p>ಜ.3ರಂದು ಜಾಮೀನು ನೀಡಿದ್ದ ನ್ಯಾಯಾಲಯವು ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೆ ಅಥವಾ 2 ತಿಂಗಳ ಅವಧಿಗೆ ಪ್ರತಿ ಭಾನುವಾರ ಅಲ್ಲು ಅರ್ಜುನ್ ತನಿಖಾಧಿಕಾರಿಗಳ ಮುಂದೆ ಹಾಜಾರಾಗಬೇಕು ಹಾಗೂ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೇ ವಿದೇಶ ಪ್ರಯಾಣ ಕೈಗೊಳ್ಳದಂತೆ ಷರತ್ತು ವಿಧಿಸಿತ್ತು. </p>.<p> ‘ಪುಷ್ಟ–2’ ಚಿತ್ರಪ್ರದರ್ಶನ ನಡೆಯುತ್ತಿದ್ದ ಸಂಧ್ಯಾ ಚಿತ್ರಮಂದಿರಕ್ಕೆ ಡಿ.4ರಂದು ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.</p>.<p>Highlights - ಪ್ರತಿ ಭಾನುವಾರ ತನಿಖಾಧಿಕಾರಿ ಎದುರು ಹಾಜರಾಗಬೇಕಿಲ್ಲ ವಿದೇಶ ಪ್ರಯಾಣಕ್ಕೆ ಅನುಮತಿಸಿ ಕೋರ್ಟ್ ಆದೇಶ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರಿಗೆ ವಿಧಿಸಿದ್ದ ಕಠಿಣ ಜಾಮೀನು ಷರತ್ತುಗಳನ್ನು ಸಡಿಲಿಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. </p>.<p>ಪ್ರತಿ ಭಾನುವಾರ ಅಲ್ಲು ಅರ್ಜುನ್ ತನಿಖಾಧಿಕಾರಿಗಳ ಎದುರು ಹಾಜರಾಗಬೇಕೆಂಬ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಅಗತ್ಯವಿದ್ದಾಗ ಚಿಕ್ಕಡಪಳ್ಳಿ ಪೊಲೀಸ್ ಠಾಣೆ ಮುಖ್ಯಸ್ಥರ ಎದುರು ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ.</p>.<p>ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೆ ತಮ್ಮ ಪ್ರಯಾಣದ ವೇಳಾಪಟ್ಟಿ ಹಾಗೂ ಆಯಾ ದೇಶದಲ್ಲಿ ಅವರು ತಂಗುವ ಸ್ಥಳದ ವಿವರಗಳನ್ನು ಅಲ್ಲು ಅರ್ಜುನ್ ಅವರು ಠಾಣೆ ಮುಖ್ಯಸ್ಥರಿಗೆ ಸಲ್ಲಿಸಬೇಕು. ಉಳಿದ ಜಾಮೀನು ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ. </p>.<p>ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಅಲ್ಲು ಅರ್ಜುನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. </p>.<p>ಜ.3ರಂದು ಜಾಮೀನು ನೀಡಿದ್ದ ನ್ಯಾಯಾಲಯವು ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೆ ಅಥವಾ 2 ತಿಂಗಳ ಅವಧಿಗೆ ಪ್ರತಿ ಭಾನುವಾರ ಅಲ್ಲು ಅರ್ಜುನ್ ತನಿಖಾಧಿಕಾರಿಗಳ ಮುಂದೆ ಹಾಜಾರಾಗಬೇಕು ಹಾಗೂ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೇ ವಿದೇಶ ಪ್ರಯಾಣ ಕೈಗೊಳ್ಳದಂತೆ ಷರತ್ತು ವಿಧಿಸಿತ್ತು. </p>.<p> ‘ಪುಷ್ಟ–2’ ಚಿತ್ರಪ್ರದರ್ಶನ ನಡೆಯುತ್ತಿದ್ದ ಸಂಧ್ಯಾ ಚಿತ್ರಮಂದಿರಕ್ಕೆ ಡಿ.4ರಂದು ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.</p>.<p>Highlights - ಪ್ರತಿ ಭಾನುವಾರ ತನಿಖಾಧಿಕಾರಿ ಎದುರು ಹಾಜರಾಗಬೇಕಿಲ್ಲ ವಿದೇಶ ಪ್ರಯಾಣಕ್ಕೆ ಅನುಮತಿಸಿ ಕೋರ್ಟ್ ಆದೇಶ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>