ಕೃಷ್ಣರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೆಶಿಸಿರುವ ಈ ಚಿತ್ರಕ್ಕೆ ‘ಬಸವನಗುಡಿ ಬೆಂಗಳೂರು’ ಎಂಬ ಅಡಿಬರಹವಿದೆ. ಕಾರ್ತಿಕ್ ಶರ್ಮ ಸಂಗೀತ ನಿರ್ದೇಶನ, ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ಜಯಂತ ಕಾಯ್ಕಿಣಿ ರಚಿಸಿದ್ದಾರೆ. ಕೆ. ಕೃಷ್ಣರಾಜ್ ಹಾಗೂ ಶೈಲೇಶ್ ರಾಜ್ ಸಂಭಾಷಣೆ ಬರೆದಿದ್ದಾರೆ. ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಆಕಾಂಕ್ಷ. ಧರ್ಮಣ್ಣ, ಅಚ್ಯುತಕುಮಾರ್, ಅರುಣಾ ಬಾಲರಾಜ್, ಮಂಜುನಾಥ್ ಹೆಗ್ಡೆ, ಸಿದ್ದು ಮೂಲಿಮನಿ, ಭೂಮಿಕಾ ಶೆಟ್ಟಿ ತಾರಾಬಳಗದಲ್ಲಿದ್ದಾರೆ.