‘ಇದೊಂದು ಕಾನೂನಿನ ಕಥೆಯನ್ನು ಹೊಂದಿರುವ ಚಿತ್ರ. ಸರ್ಕಾರ ಮತ್ತು ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಮಾತಿನ ಭಾಗದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಪ್ರಾರಂಭವಾಗಿದೆ’ ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ ತಿಳಿಸಿದ್ದಾರೆ.
ಈ ಚಿತ್ರಕ್ಕೆ ಪಿಕೆಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ.ಎಸ್. ಸಂಕಲನವಿದೆ.