ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ. ಕೊಟಗಿ ಅವರು ಚಿತ್ರ ನಿರ್ಮಿಸಿದ್ದಾರೆ. ವರ್ಧನ್ ಈ ಚಿತ್ರದಲ್ಲಿ ನಾಯಕ. ಅನುಷ,‘ತಿಥಿ’ ಚಿತ್ರದ ಖ್ಯಾತಿಯ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್ ಇದ್ದಾರೆ. ಲೋಕಿ ಸಂಗೀತ ನಿರ್ದೇಶನವಿದೆ. ಈ ಚಿತ್ರಕ್ಕೆ ನಿತಿನ್ ಅವರ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನ ಇದೆ.