<p><strong>ಮಂಗಳೂರು</strong>: ಟೋಕಿಯೊ– 2020 ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಎಸೆತದ ಮೂಲಕ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಸಾಧನೆ ದೇಶದೆಲ್ಲೆಡೆ ಮನೆ ಮಾತು. ಅವರ ಕುರಿತು ಸಿನಿಮಾ ಮಾಡಲು ನಿರ್ಮಾಪಕ, ದಕ್ಷಿಣ ಕನ್ನಡ ಜಿಲ್ಲೆಯ ಅರುಣ್ ರೈ ತೋಡಾರ್ ಈಗ ಮುಂದಾಗಿದ್ದಾರೆ.</p>.<p>ತುಳುನಾಡಿನ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಬಗ್ಗೆ ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ‘ಬಿರ್ದ್ದ ಕಂಬುಲ’ ಸಿನಿಮಾ ನಿರ್ಮಾಣ ಮಾಡುತ್ತಿರುವ ಅರುಣ್ ರೈ ತೋಡಾರ್, ಮತ್ತೊಂದು ಸಾಹಸಕ್ಕೆ ಅಣಿಯಾಗಿದ್ದಾರೆ. ಮಂಗಳೂರು ಎ.ಆರ್. ಪ್ರೊಡಕ್ಸನ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೀರಜ್ ಚೋಪ್ರಾ ಕುರಿತು ಹಿಂದಿಯಲ್ಲಿ ಸಿನಿಮಾವನ್ನು ನಿರ್ಮಿಸಿ ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಗೆ ಡಬ್ ಮಾಡಲು ಚಿಂತನೆ ನಡೆಸಲಾಗಿದೆ. ಆ ಮೂಲಕ ದೇಶದ ಯುವ ಜನತೆಯಲ್ಲಿ ಕ್ರೀಡಾಸ್ಫೂರ್ತಿ ತುಂಬುವುದು ನಮ್ಮ ಉದ್ದೇಶ’ ಎಂದರು.</p>.<p>ಬಿರ್ದ್ದ ಕಂಬುಲು ಸಿನಿಮಾ ಮುಕ್ತಾಯದ ಬಳಿಕ ನೀರಜ್ ಕುರಿತ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಟೋಕಿಯೊ– 2020 ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಎಸೆತದ ಮೂಲಕ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಸಾಧನೆ ದೇಶದೆಲ್ಲೆಡೆ ಮನೆ ಮಾತು. ಅವರ ಕುರಿತು ಸಿನಿಮಾ ಮಾಡಲು ನಿರ್ಮಾಪಕ, ದಕ್ಷಿಣ ಕನ್ನಡ ಜಿಲ್ಲೆಯ ಅರುಣ್ ರೈ ತೋಡಾರ್ ಈಗ ಮುಂದಾಗಿದ್ದಾರೆ.</p>.<p>ತುಳುನಾಡಿನ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಬಗ್ಗೆ ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ‘ಬಿರ್ದ್ದ ಕಂಬುಲ’ ಸಿನಿಮಾ ನಿರ್ಮಾಣ ಮಾಡುತ್ತಿರುವ ಅರುಣ್ ರೈ ತೋಡಾರ್, ಮತ್ತೊಂದು ಸಾಹಸಕ್ಕೆ ಅಣಿಯಾಗಿದ್ದಾರೆ. ಮಂಗಳೂರು ಎ.ಆರ್. ಪ್ರೊಡಕ್ಸನ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೀರಜ್ ಚೋಪ್ರಾ ಕುರಿತು ಹಿಂದಿಯಲ್ಲಿ ಸಿನಿಮಾವನ್ನು ನಿರ್ಮಿಸಿ ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಗೆ ಡಬ್ ಮಾಡಲು ಚಿಂತನೆ ನಡೆಸಲಾಗಿದೆ. ಆ ಮೂಲಕ ದೇಶದ ಯುವ ಜನತೆಯಲ್ಲಿ ಕ್ರೀಡಾಸ್ಫೂರ್ತಿ ತುಂಬುವುದು ನಮ್ಮ ಉದ್ದೇಶ’ ಎಂದರು.</p>.<p>ಬಿರ್ದ್ದ ಕಂಬುಲು ಸಿನಿಮಾ ಮುಕ್ತಾಯದ ಬಳಿಕ ನೀರಜ್ ಕುರಿತ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>