<p><strong>ಬೆಂಗಳೂರು:</strong> ಮೈಸೂರಿನ ಸಂದೇಶ್ ನಾಗರಾಜ್ ಹೊಟೇಲ್ನಲ್ಲಿ ಸ್ಟಾರ್ ನಟರೊಬ್ಬರು ದಲಿತ ಸಮುದಾಯದ ವೇಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ವಿಚಾರವಾಗಿ ಹೊಟೇಲ್ನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅಲ್ಲಿನ ವೇಟರ್ಗಳ ವಿಚಾರಣೆಯನ್ನೂ ನಡೆಸಿ ತುರ್ತು ಕ್ರಮ ಜರುಗಿಸಬೇಕು. ಈ ಘಟನೆಯಿಂದ ದಲಿತರಲ್ಲಿ ಅವ್ಯಕ್ತವಾದ ಭಯದ ವಾತಾವರಣ ನಿರ್ಮಾಣವಾಗಿದೆ. ದಲಿತರು, ಬಡವರು, ಶೋಷಿತರ ಜೀವಕ್ಕೆ ಯಾವುದೇ ಸುರಕ್ಷತೆ ಇಲ್ಲವಾಗಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/entertainment/cinema/narappa-is-one-of-the-much-awaited-movies-of-tollywood-in-which-venkatesh-daggubati-is-playing-the-848325.html" itemprop="url">ಜುಲೈ 20ಕ್ಕೆ ‘ನಾರಪ್ಪ‘ ಬಿಡುಗಡೆ: ವೆಂಕಟೇಶ್ ಅಭಿಮಾನಿಗಳಲ್ಲಿ ಉಕ್ಕಿದ ಸಂಭ್ರಮ </a></p>.<p>ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಮಿತಿ ಮೀರಿವೆ. ಪೊಲೀಸ್ ವ್ಯವಸ್ಥೆಯೂ ಸಂಪೂರ್ಣವಾಗಿ ಹದಗೆಟ್ಟಿದೆ. ಪ್ರಭಾವಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾ ಪೊಲೀಸರು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p>.<p>ಸಾಲದ ವಿವಾದದಲ್ಲಿ ಮಹಿಳೆಯನ್ನು ಸ್ವಾರ್ಥಕ್ಕೆ ಬಳಸಿಕೊಂಡು, ಪೊಲೀಸರ ಮೇಲೆ ಒತ್ತಡ ತಂದು ಪ್ರಭಾವಿಗಳು ಮಾತ್ರ ಪ್ರಕರಣದಿಂದ ನುಣುಚಿಕೊಳ್ಳುತ್ತಿದ್ದಾರೆ. ಇದು ಸಾಮಾನ್ಯ ಮಹಿಳೆಯರಲ್ಲಿ ನ್ಯಾಯದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಿದೆ. ಇದೇ ಸಾಮಾನ್ಯ ವ್ಯಕ್ತಿಯಾಗಿದ್ದರೆ ಸುಮ್ಮನೇ ಬಿಡುತ್ತಿದ್ದಿರಾ? ಜನಸಾಮಾನ್ಯರಿಗೆ ಒಂದು ನ್ಯಾಯ; ಪ್ರಭಾವಿಗಳಿಗೆ ಮತ್ತೊಂದು ನ್ಯಾಯವೇ? ಇದು ಮಹಿಳೆಯರ ಮೇಲಿನ ದೌರ್ಜ್ಯನಕ್ಕೆ ಸಾಕ್ಷಿ ಅಲ್ಲವೇ ಎಂದು ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ.</p>.<p><strong>ಸಮಗ್ರ ತನಿಖೆಗೆ ಸೂಚನೆ:</strong></p>.<p>ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ಊಹಾಪೋಹಗಳು ಬೇಕಿಲ್ಲ. ಈ ಪ್ರಕರಣದ ಬಗ್ಗೆ ಸಮಗ್ರವಾಗಿ ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈಸೂರಿನ ಸಂದೇಶ್ ನಾಗರಾಜ್ ಹೊಟೇಲ್ನಲ್ಲಿ ಸ್ಟಾರ್ ನಟರೊಬ್ಬರು ದಲಿತ ಸಮುದಾಯದ ವೇಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ವಿಚಾರವಾಗಿ ಹೊಟೇಲ್ನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅಲ್ಲಿನ ವೇಟರ್ಗಳ ವಿಚಾರಣೆಯನ್ನೂ ನಡೆಸಿ ತುರ್ತು ಕ್ರಮ ಜರುಗಿಸಬೇಕು. ಈ ಘಟನೆಯಿಂದ ದಲಿತರಲ್ಲಿ ಅವ್ಯಕ್ತವಾದ ಭಯದ ವಾತಾವರಣ ನಿರ್ಮಾಣವಾಗಿದೆ. ದಲಿತರು, ಬಡವರು, ಶೋಷಿತರ ಜೀವಕ್ಕೆ ಯಾವುದೇ ಸುರಕ್ಷತೆ ಇಲ್ಲವಾಗಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/entertainment/cinema/narappa-is-one-of-the-much-awaited-movies-of-tollywood-in-which-venkatesh-daggubati-is-playing-the-848325.html" itemprop="url">ಜುಲೈ 20ಕ್ಕೆ ‘ನಾರಪ್ಪ‘ ಬಿಡುಗಡೆ: ವೆಂಕಟೇಶ್ ಅಭಿಮಾನಿಗಳಲ್ಲಿ ಉಕ್ಕಿದ ಸಂಭ್ರಮ </a></p>.<p>ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಮಿತಿ ಮೀರಿವೆ. ಪೊಲೀಸ್ ವ್ಯವಸ್ಥೆಯೂ ಸಂಪೂರ್ಣವಾಗಿ ಹದಗೆಟ್ಟಿದೆ. ಪ್ರಭಾವಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾ ಪೊಲೀಸರು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p>.<p>ಸಾಲದ ವಿವಾದದಲ್ಲಿ ಮಹಿಳೆಯನ್ನು ಸ್ವಾರ್ಥಕ್ಕೆ ಬಳಸಿಕೊಂಡು, ಪೊಲೀಸರ ಮೇಲೆ ಒತ್ತಡ ತಂದು ಪ್ರಭಾವಿಗಳು ಮಾತ್ರ ಪ್ರಕರಣದಿಂದ ನುಣುಚಿಕೊಳ್ಳುತ್ತಿದ್ದಾರೆ. ಇದು ಸಾಮಾನ್ಯ ಮಹಿಳೆಯರಲ್ಲಿ ನ್ಯಾಯದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಿದೆ. ಇದೇ ಸಾಮಾನ್ಯ ವ್ಯಕ್ತಿಯಾಗಿದ್ದರೆ ಸುಮ್ಮನೇ ಬಿಡುತ್ತಿದ್ದಿರಾ? ಜನಸಾಮಾನ್ಯರಿಗೆ ಒಂದು ನ್ಯಾಯ; ಪ್ರಭಾವಿಗಳಿಗೆ ಮತ್ತೊಂದು ನ್ಯಾಯವೇ? ಇದು ಮಹಿಳೆಯರ ಮೇಲಿನ ದೌರ್ಜ್ಯನಕ್ಕೆ ಸಾಕ್ಷಿ ಅಲ್ಲವೇ ಎಂದು ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ.</p>.<p><strong>ಸಮಗ್ರ ತನಿಖೆಗೆ ಸೂಚನೆ:</strong></p>.<p>ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ಊಹಾಪೋಹಗಳು ಬೇಕಿಲ್ಲ. ಈ ಪ್ರಕರಣದ ಬಗ್ಗೆ ಸಮಗ್ರವಾಗಿ ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>