<p>‘ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್. ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ. ಬಂದಾಗ ಎಲ್ಲಾನು ತಿಳಿಸುತ್ತೇನೆ...’</p>.<p>ಹೀಗೆಂದು ‘ಚಾಲೆಂಜಿಗ್ ಸ್ಟಾರ್’ ದರ್ಶನ್ ಚಾಲೆಂಜ್ ಹಾಕಿರುವುದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ದರ್ಶನ್ ಅವರ ಬರಹಕ್ಕೆ ಉತ್ಸಾಹದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಆದರೆ, ದಚ್ಚು ಓಪನ್ ಚಾಲೆಂಜ್ ಹಾಕಿರುವುದು ಯಾರಿಗೆ ಎನ್ನುವುದು ಎಲ್ಲರಲ್ಲೂ ಕುತೂಹಲ ಹೆಚ್ಚಿಸಿದೆ. ಈಗ ಮತ್ತೊಂದು ಟ್ವೀಟ್ ಮಾಡಿರುವ ದರ್ಶನ್ ಮಧ್ಯಾಹ್ನ 1 ಗಂಟೆಗೆ ಈ ಚಾಲೆಂಜ್ ಎಂದು ಹೇಳಿದ್ದಾರೆ.</p>.<p>ದರ್ಶನ್ ಯಾವುದೇ ಚಿತ್ರೀಕರಣಕ್ಕೆ ಹೋಗುವ ಮೊದಲು ಬೆಳಿಗ್ಗೆಯೇ ಜಿಮ್ನಲ್ಲಿ ಒಂದೂವರೆ ಗಂಟೆಕಾಲ ಕಸರತ್ತು ನಡೆಸುತ್ತಾರೆ. ಅವರು ಫಿಟ್ನೆಸ್ನಲ್ಲಿ ದೈತ್ಯ ಎಂದು ಎಲ್ಲರಿಗೂ ಗೊತ್ತು. ಅವರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸವಾಲು ನೀಡುತ್ತಿರಬಹುದು ಎನ್ನುವ ಲೆಕ್ಕಾಚಾರದಲ್ಲಿ ಅಭಿಮಾನಿಗಳು ಮುಳುಗಿದ್ದಾರೆ. ಈ ಹಿಂದೆ ಅವರು ಸ್ನೇಹಿತರಾದ ಸೃಜನ್, ವಿನೋದ್ ಪ್ರಭಾಕರ್ಗೆ ಇಂತಹ ಸವಾಲು ನೀಡಿದ್ದರು.</p>.<p>ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವೇಳೆ ಪರೋಕ್ಷವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ, ಜೆಡಿಎಸ್ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಸವಾಲು ಎಸೆದಿದ್ದು ಉಂಟು.</p>.<p>‘ತಾವು ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ವ್ಯಕ್ತಿಗಳು ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಎಂದು ಹೇಳಲಿ. ಒಂದು ಲೋಟ ಹಾಲು ಕರೆದು ತೋರಿಸಲಿ’ ಎಂದು ಓಪನ್ ಚಾಲೆಂಜ್ ಮಾಡಿದ್ದರು.</p>.<p>ಅಂದಹಾಗೆ ‘ಮುನಿರತ್ನ ಕುರುಕ್ಷೇತ್ರ’ದ ಚಿತ್ರದ ಆಡಿಯೊ ಬಿಡುಗಡೆ ಜುಲೈ 7ರಂದು ನಡೆಯಲಿದೆ. ಕಾರ್ಯಕ್ರಮದ ಪಾಸ್ಗಳಲ್ಲಿ ಕಲಾವಿದರ ಫೋಟೊ ಮುದ್ರಿಸಿಲ್ಲ ಎಂದು ದರ್ಶನ್ ಅಭಿಮಾನಿಗಳ ಬೇಸರ ತೋಡಿಕೊಂಡಿದ್ದಾರೆ.</p>.<p>ಈ ನಡುವೆಯೇ ಚಿತ್ರದ ಮುಖ್ಯ ನಟರೊಬ್ಬರು ಇನ್ನೂ ತಮ್ಮ ಪಾತ್ರದ ಡಬ್ಬಿಂಗ್ ಪೂರ್ಣಗೊಳಿಸಿಲ್ಲ ಎನ್ನಲಾಗಿದೆ. ಈ ಚಿತ್ರ ಕುರಿತಾಗಿ ದಚ್ಚು ಸವಾಲು ಹಾಕುತ್ತಿರಬಹುದೇ ಎನ್ನುವ ಚರ್ಚೆಯೂ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್. ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ. ಬಂದಾಗ ಎಲ್ಲಾನು ತಿಳಿಸುತ್ತೇನೆ...’</p>.<p>ಹೀಗೆಂದು ‘ಚಾಲೆಂಜಿಗ್ ಸ್ಟಾರ್’ ದರ್ಶನ್ ಚಾಲೆಂಜ್ ಹಾಕಿರುವುದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ದರ್ಶನ್ ಅವರ ಬರಹಕ್ಕೆ ಉತ್ಸಾಹದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಆದರೆ, ದಚ್ಚು ಓಪನ್ ಚಾಲೆಂಜ್ ಹಾಕಿರುವುದು ಯಾರಿಗೆ ಎನ್ನುವುದು ಎಲ್ಲರಲ್ಲೂ ಕುತೂಹಲ ಹೆಚ್ಚಿಸಿದೆ. ಈಗ ಮತ್ತೊಂದು ಟ್ವೀಟ್ ಮಾಡಿರುವ ದರ್ಶನ್ ಮಧ್ಯಾಹ್ನ 1 ಗಂಟೆಗೆ ಈ ಚಾಲೆಂಜ್ ಎಂದು ಹೇಳಿದ್ದಾರೆ.</p>.<p>ದರ್ಶನ್ ಯಾವುದೇ ಚಿತ್ರೀಕರಣಕ್ಕೆ ಹೋಗುವ ಮೊದಲು ಬೆಳಿಗ್ಗೆಯೇ ಜಿಮ್ನಲ್ಲಿ ಒಂದೂವರೆ ಗಂಟೆಕಾಲ ಕಸರತ್ತು ನಡೆಸುತ್ತಾರೆ. ಅವರು ಫಿಟ್ನೆಸ್ನಲ್ಲಿ ದೈತ್ಯ ಎಂದು ಎಲ್ಲರಿಗೂ ಗೊತ್ತು. ಅವರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸವಾಲು ನೀಡುತ್ತಿರಬಹುದು ಎನ್ನುವ ಲೆಕ್ಕಾಚಾರದಲ್ಲಿ ಅಭಿಮಾನಿಗಳು ಮುಳುಗಿದ್ದಾರೆ. ಈ ಹಿಂದೆ ಅವರು ಸ್ನೇಹಿತರಾದ ಸೃಜನ್, ವಿನೋದ್ ಪ್ರಭಾಕರ್ಗೆ ಇಂತಹ ಸವಾಲು ನೀಡಿದ್ದರು.</p>.<p>ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವೇಳೆ ಪರೋಕ್ಷವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ, ಜೆಡಿಎಸ್ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಸವಾಲು ಎಸೆದಿದ್ದು ಉಂಟು.</p>.<p>‘ತಾವು ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ವ್ಯಕ್ತಿಗಳು ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಎಂದು ಹೇಳಲಿ. ಒಂದು ಲೋಟ ಹಾಲು ಕರೆದು ತೋರಿಸಲಿ’ ಎಂದು ಓಪನ್ ಚಾಲೆಂಜ್ ಮಾಡಿದ್ದರು.</p>.<p>ಅಂದಹಾಗೆ ‘ಮುನಿರತ್ನ ಕುರುಕ್ಷೇತ್ರ’ದ ಚಿತ್ರದ ಆಡಿಯೊ ಬಿಡುಗಡೆ ಜುಲೈ 7ರಂದು ನಡೆಯಲಿದೆ. ಕಾರ್ಯಕ್ರಮದ ಪಾಸ್ಗಳಲ್ಲಿ ಕಲಾವಿದರ ಫೋಟೊ ಮುದ್ರಿಸಿಲ್ಲ ಎಂದು ದರ್ಶನ್ ಅಭಿಮಾನಿಗಳ ಬೇಸರ ತೋಡಿಕೊಂಡಿದ್ದಾರೆ.</p>.<p>ಈ ನಡುವೆಯೇ ಚಿತ್ರದ ಮುಖ್ಯ ನಟರೊಬ್ಬರು ಇನ್ನೂ ತಮ್ಮ ಪಾತ್ರದ ಡಬ್ಬಿಂಗ್ ಪೂರ್ಣಗೊಳಿಸಿಲ್ಲ ಎನ್ನಲಾಗಿದೆ. ಈ ಚಿತ್ರ ಕುರಿತಾಗಿ ದಚ್ಚು ಸವಾಲು ಹಾಕುತ್ತಿರಬಹುದೇ ಎನ್ನುವ ಚರ್ಚೆಯೂ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>