<p><strong>ಬೆಂಗಳೂರು:</strong> ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಸೇರಿ ಏಳು ಜನರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. </p>.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.<p>ಈ ಕುರಿತು ಪ್ರತಿಕ್ರಿಯಿಸಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ <a href="https://www.instagram.com/stories/divyaspandana/3698786608905679067?igsh=dHJvenMweGZ2bnFl">ನಟಿ ರಮ್ಯಾ</a>, ‘ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎನ್ನುವ ಬಲವಾದ ಸಂದೇಶವನ್ನು ರವಾನಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ. </p><p>'ನಾನು ಹೇಳುವುದೇನೆಂದರೆ, ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ನ್ಯಾಯ ಸಿಗುವ ಪ್ರಕ್ರಿಯೆ ದೀರ್ಘ ಮತ್ತು ಕಠಿಣ ಹಾದಿಯಾದರೂ, ಕೊನೆಯಲ್ಲಿ ಬೆಳಕು ಇರುತ್ತದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ದೊರಕುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಸತ್ಯವಂತರಾಗಿರಿ’ ಎಂದು ಬರೆದುಕೊಂಡಿದ್ದಾರೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಮ್ಯಾ ಅವರು ಹಂಚಿಕೊಂಡ ಪೋಸ್ಟ್ಗೆ ದರ್ಶನ್ ಅಭಿಮಾನಿಗಳು ಅಶ್ಲೀಲವಾಗಿ ಸಂದೇಶ ಕಳಿಸಿದ್ದರು ಎಂದು ದೂರು ನೀಡಿ, ಕಠಿಣ ಕಾನೂನಿನ ಕ್ರಮಕ್ಕೆ ಆಗ್ರಹಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಶ್ಲೀಲ ಸಂದೇಶ ಕಳುಹಿಸಿದ್ದ ಕೆಲವರನ್ನು ಬಂಧಿಸಿದ್ದಾರೆ. </p>.ದರ್ಶನ್ ಫ್ಯಾನ್ಸ್ ಮೆಸೇಜ್ಗೂ,ರೇಣುಕಸ್ವಾಮಿ ಮೆಸೇಜ್ಗೂ ವ್ಯತ್ಯಾಸ ಇಲ್ಲ: ರಮ್ಯಾ.ಅಶ್ಲೀಲ, ಅವಹೇಳನಕಾರಿ ಸಂದೇಶ ಪ್ರಕರಣ: 43 ಖಾತೆಗಳ ವಿರುದ್ದ ರಮ್ಯಾ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಸೇರಿ ಏಳು ಜನರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. </p>.ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.<p>ಈ ಕುರಿತು ಪ್ರತಿಕ್ರಿಯಿಸಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ <a href="https://www.instagram.com/stories/divyaspandana/3698786608905679067?igsh=dHJvenMweGZ2bnFl">ನಟಿ ರಮ್ಯಾ</a>, ‘ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎನ್ನುವ ಬಲವಾದ ಸಂದೇಶವನ್ನು ರವಾನಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ. </p><p>'ನಾನು ಹೇಳುವುದೇನೆಂದರೆ, ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ನ್ಯಾಯ ಸಿಗುವ ಪ್ರಕ್ರಿಯೆ ದೀರ್ಘ ಮತ್ತು ಕಠಿಣ ಹಾದಿಯಾದರೂ, ಕೊನೆಯಲ್ಲಿ ಬೆಳಕು ಇರುತ್ತದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ದೊರಕುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಸತ್ಯವಂತರಾಗಿರಿ’ ಎಂದು ಬರೆದುಕೊಂಡಿದ್ದಾರೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಮ್ಯಾ ಅವರು ಹಂಚಿಕೊಂಡ ಪೋಸ್ಟ್ಗೆ ದರ್ಶನ್ ಅಭಿಮಾನಿಗಳು ಅಶ್ಲೀಲವಾಗಿ ಸಂದೇಶ ಕಳಿಸಿದ್ದರು ಎಂದು ದೂರು ನೀಡಿ, ಕಠಿಣ ಕಾನೂನಿನ ಕ್ರಮಕ್ಕೆ ಆಗ್ರಹಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಶ್ಲೀಲ ಸಂದೇಶ ಕಳುಹಿಸಿದ್ದ ಕೆಲವರನ್ನು ಬಂಧಿಸಿದ್ದಾರೆ. </p>.ದರ್ಶನ್ ಫ್ಯಾನ್ಸ್ ಮೆಸೇಜ್ಗೂ,ರೇಣುಕಸ್ವಾಮಿ ಮೆಸೇಜ್ಗೂ ವ್ಯತ್ಯಾಸ ಇಲ್ಲ: ರಮ್ಯಾ.ಅಶ್ಲೀಲ, ಅವಹೇಳನಕಾರಿ ಸಂದೇಶ ಪ್ರಕರಣ: 43 ಖಾತೆಗಳ ವಿರುದ್ದ ರಮ್ಯಾ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>