<p><strong>ಬೆಂಗಳೂರು: </strong>ಕೊರೊನಾ ವೈರಸ್ನಿಂದ ಪಾರಾಗುವುದೇ ಮೊದಲ ಆದ್ಯತೆಯಾಗಿರುವುದರಿಂದ ನಾಗರಿಕರಂತೆ ವರ್ತಿಸಿ, ನಿಮ್ಮಿಂದಾಗಿ ಇಡೀ ದೇಶವನ್ನೇ ಬಲಿಕೊಡಬೇಡಿ ಎಂದು ನಟ ದರ್ಶನ್ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.</p>.<p>ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನು ಪ್ರಕಟಿಸಿ ಜನರಲ್ಲಿ ಮನವಿ ಮಾಡಿದ್ದಾರೆ.</p>.<p>ನಾವು ಕೊರೊನಾ ವಿರುದ್ಧ ಹೋರಾಟ ನಡೆಸಬೇಕಿದೆ. ಇದರಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆಯಾಗಿರಬೇಕು ಈ ನಿಟ್ಟಿನಲ್ಲಿ ಎಲ್ಲಾ ಭಾರತೀಯರೂ ಜನರಲ್ಲಿ ವೈರಸ್ ಬಗ್ಗೆ ಅರಿವು ಮೂಡಿಸಲು ವೈದ್ಯರು, ಅಧಿಕಾರಿಗಳು, ಸರ್ಕಾರ, ಪೊಲೀಸ್ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ ಅವರಿಗೆ ನಾವು ಸಾಥ್ ಕೊಡಬೇಕು ಎಂದು ಎಲ್ಲಾ ಭಾರತೀಯಲ್ಲಿ ಕಳಕಳಿಯ ಮನವಿ ಮಾಡುತ್ತೇನೆ ಎಂದು ದರ್ಶನ್ ಮನವಿ ಮಾಡಿದ್ದಾರೆ.</p>.<p>ಈ ಸೋಂಕು ಬಹಳ ಅಪಾಯಕಾರಿಯಾಗಿದ್ದು ಹಬ್ಬಕ್ಕೆ ಸಂಚಾರ ಮಾಡುವುದು, ಗುಂಪು ಸೇರುವುದನ್ನು ಮಾಡಬೇಡಿ. ಈ ರೀತಿ ಮಾಡಿದರೆ, ನಿಮ್ಮಿಂದಾಗಿ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ನಡೆದಕೊಂಡು ಸರ್ಕಾರದ ನಿಯಮಗಳನ್ನು ಪಾಲಿಸಿ, ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ದರ್ಶನ್ ಮನವಿ ಮಾಡಿದ್ದಾರೆ.</p>.<p>ಈ ಫೋಸ್ಟ್ಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಅನ್ನು 50 ಸಾವಿರಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ವೈರಸ್ನಿಂದ ಪಾರಾಗುವುದೇ ಮೊದಲ ಆದ್ಯತೆಯಾಗಿರುವುದರಿಂದ ನಾಗರಿಕರಂತೆ ವರ್ತಿಸಿ, ನಿಮ್ಮಿಂದಾಗಿ ಇಡೀ ದೇಶವನ್ನೇ ಬಲಿಕೊಡಬೇಡಿ ಎಂದು ನಟ ದರ್ಶನ್ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.</p>.<p>ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನು ಪ್ರಕಟಿಸಿ ಜನರಲ್ಲಿ ಮನವಿ ಮಾಡಿದ್ದಾರೆ.</p>.<p>ನಾವು ಕೊರೊನಾ ವಿರುದ್ಧ ಹೋರಾಟ ನಡೆಸಬೇಕಿದೆ. ಇದರಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆಯಾಗಿರಬೇಕು ಈ ನಿಟ್ಟಿನಲ್ಲಿ ಎಲ್ಲಾ ಭಾರತೀಯರೂ ಜನರಲ್ಲಿ ವೈರಸ್ ಬಗ್ಗೆ ಅರಿವು ಮೂಡಿಸಲು ವೈದ್ಯರು, ಅಧಿಕಾರಿಗಳು, ಸರ್ಕಾರ, ಪೊಲೀಸ್ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ ಅವರಿಗೆ ನಾವು ಸಾಥ್ ಕೊಡಬೇಕು ಎಂದು ಎಲ್ಲಾ ಭಾರತೀಯಲ್ಲಿ ಕಳಕಳಿಯ ಮನವಿ ಮಾಡುತ್ತೇನೆ ಎಂದು ದರ್ಶನ್ ಮನವಿ ಮಾಡಿದ್ದಾರೆ.</p>.<p>ಈ ಸೋಂಕು ಬಹಳ ಅಪಾಯಕಾರಿಯಾಗಿದ್ದು ಹಬ್ಬಕ್ಕೆ ಸಂಚಾರ ಮಾಡುವುದು, ಗುಂಪು ಸೇರುವುದನ್ನು ಮಾಡಬೇಡಿ. ಈ ರೀತಿ ಮಾಡಿದರೆ, ನಿಮ್ಮಿಂದಾಗಿ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ನಡೆದಕೊಂಡು ಸರ್ಕಾರದ ನಿಯಮಗಳನ್ನು ಪಾಲಿಸಿ, ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ದರ್ಶನ್ ಮನವಿ ಮಾಡಿದ್ದಾರೆ.</p>.<p>ಈ ಫೋಸ್ಟ್ಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಅನ್ನು 50 ಸಾವಿರಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>