ಬೆಂಗಳೂರು: ಕೊರೊನಾ ವೈರಸ್ನಿಂದ ಪಾರಾಗುವುದೇ ಮೊದಲ ಆದ್ಯತೆಯಾಗಿರುವುದರಿಂದ ನಾಗರಿಕರಂತೆ ವರ್ತಿಸಿ, ನಿಮ್ಮಿಂದಾಗಿ ಇಡೀ ದೇಶವನ್ನೇ ಬಲಿಕೊಡಬೇಡಿ ಎಂದು ನಟ ದರ್ಶನ್ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನು ಪ್ರಕಟಿಸಿ ಜನರಲ್ಲಿ ಮನವಿ ಮಾಡಿದ್ದಾರೆ.
ನಾವು ಕೊರೊನಾ ವಿರುದ್ಧ ಹೋರಾಟ ನಡೆಸಬೇಕಿದೆ. ಇದರಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆಯಾಗಿರಬೇಕು ಈ ನಿಟ್ಟಿನಲ್ಲಿ ಎಲ್ಲಾ ಭಾರತೀಯರೂ ಜನರಲ್ಲಿ ವೈರಸ್ ಬಗ್ಗೆ ಅರಿವು ಮೂಡಿಸಲು ವೈದ್ಯರು, ಅಧಿಕಾರಿಗಳು, ಸರ್ಕಾರ, ಪೊಲೀಸ್ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ ಅವರಿಗೆ ನಾವು ಸಾಥ್ ಕೊಡಬೇಕು ಎಂದು ಎಲ್ಲಾ ಭಾರತೀಯಲ್ಲಿ ಕಳಕಳಿಯ ಮನವಿ ಮಾಡುತ್ತೇನೆ ಎಂದು ದರ್ಶನ್ ಮನವಿ ಮಾಡಿದ್ದಾರೆ.
ಈ ಸೋಂಕು ಬಹಳ ಅಪಾಯಕಾರಿಯಾಗಿದ್ದು ಹಬ್ಬಕ್ಕೆ ಸಂಚಾರ ಮಾಡುವುದು, ಗುಂಪು ಸೇರುವುದನ್ನು ಮಾಡಬೇಡಿ. ಈ ರೀತಿ ಮಾಡಿದರೆ, ನಿಮ್ಮಿಂದಾಗಿ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ನಡೆದಕೊಂಡು ಸರ್ಕಾರದ ನಿಯಮಗಳನ್ನು ಪಾಲಿಸಿ, ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ದರ್ಶನ್ ಮನವಿ ಮಾಡಿದ್ದಾರೆ.
ಈ ಫೋಸ್ಟ್ಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಅನ್ನು 50 ಸಾವಿರಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.