<p>ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ದರ್ಶನ್ ನಟನೆಯ ‘ಡೆವಿಲ್–ದಿ ಹೀರೊ’ ಚಿತ್ರದ ಟ್ರೇಲರ್ ಡಿ.5ರಂದು ಬಿಡುಗಡೆಯಾಗಲಿದೆ. </p><p>ಈ ಬಗ್ಗೆ ಚಿತ್ರತಂಡವು ಸೋಮವಾರ ಘೋಷಿಸಿದ್ದು, ‘ನಾನು ಬರ್ತಿದ್ದೀನಿ ಚಿನ್ನ’ ಎಂಬ ದರ್ಶನ್ ಡೈಲಾಗ್ ಮೂಲಕ ಟ್ರೇಲರ್ ಬಿಡುಗಡೆಯ ಬಗ್ಗೆ ಚಿತ್ರತಂಡ ತಿಳಿಸಿದೆ. ಸಿನಿಮಾ ಡಿ.11ರಂದು ತೆರೆಕಾಣಲಿದೆ. </p><p>‘ಇದ್ರೆ ನೆಮ್ದಿಯಾಗ್ ಇರ್ಬೇಕ್..’ ಎಂಬ ಹಾಡಿನ ಬಿಡುಗಡೆ ಮೂಲಕ ಚಿತ್ರದ ಪ್ರಚಾರ ಆರಂಭಿಸಿದ್ದ ಚಿತ್ರತಂಡ ಇಲ್ಲಿಯವರೆಗೆ ಮೂರು ಹಾಡುಗಳನ್ನು ರಿಲೀಸ್ ಮಾಡಿದೆ. ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಸುಧಾಕರ್ ಎಸ್.ರಾಜ್ ಛಾಯಾಚಿತ್ರಗ್ರಹಣ, ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ದರ್ಶನ್ಗೆ ನಾಯಕಿಯಾಗಿ ರಚನ ರೈ ನಟಿಸಿದ್ದು, ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ದರ್ಶನ್ ನಟನೆಯ ‘ಡೆವಿಲ್–ದಿ ಹೀರೊ’ ಚಿತ್ರದ ಟ್ರೇಲರ್ ಡಿ.5ರಂದು ಬಿಡುಗಡೆಯಾಗಲಿದೆ. </p><p>ಈ ಬಗ್ಗೆ ಚಿತ್ರತಂಡವು ಸೋಮವಾರ ಘೋಷಿಸಿದ್ದು, ‘ನಾನು ಬರ್ತಿದ್ದೀನಿ ಚಿನ್ನ’ ಎಂಬ ದರ್ಶನ್ ಡೈಲಾಗ್ ಮೂಲಕ ಟ್ರೇಲರ್ ಬಿಡುಗಡೆಯ ಬಗ್ಗೆ ಚಿತ್ರತಂಡ ತಿಳಿಸಿದೆ. ಸಿನಿಮಾ ಡಿ.11ರಂದು ತೆರೆಕಾಣಲಿದೆ. </p><p>‘ಇದ್ರೆ ನೆಮ್ದಿಯಾಗ್ ಇರ್ಬೇಕ್..’ ಎಂಬ ಹಾಡಿನ ಬಿಡುಗಡೆ ಮೂಲಕ ಚಿತ್ರದ ಪ್ರಚಾರ ಆರಂಭಿಸಿದ್ದ ಚಿತ್ರತಂಡ ಇಲ್ಲಿಯವರೆಗೆ ಮೂರು ಹಾಡುಗಳನ್ನು ರಿಲೀಸ್ ಮಾಡಿದೆ. ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಸುಧಾಕರ್ ಎಸ್.ರಾಜ್ ಛಾಯಾಚಿತ್ರಗ್ರಹಣ, ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ದರ್ಶನ್ಗೆ ನಾಯಕಿಯಾಗಿ ರಚನ ರೈ ನಟಿಸಿದ್ದು, ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>