ಫೇಸ್ಬುಕ್ ಲೈವ್ನಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರುವ ಅವರು, ‘ಈಗಾಗಲೇ ಮಾರುಕಟ್ಟೆ, ಕಲ್ಯಾಣ ಮಂಟಪ, ಶಾಲೆ ಹಾಗೂ ಕಾಲೇಜುಗಳು ಆರಂಭವಾಗಿದೆ. ಆದರೆ ಚಿತ್ರಮಂದಿರಗಳನ್ನು ತೆರೆಯುತ್ತಿಲ್ಲ. ಇದಕ್ಕೆ 5ಜಿ ಕಾರಣ. ಬಹುಶಃ ಇದು ಬಹುದೊಡ್ಡ ಹಗರಣ ಎನಿಸುತ್ತಿದೆ. ನಮಗೆ ನೀವು ಸಿನಿಮಾ ಮಂದಿರದಲ್ಲಿ ಬಂದು ನೋಡಿದರೆ ಮಾತ್ರ ತೃಪ್ತಿ. ನೀವು ಮೊಬೈಲ್ನಲ್ಲೋ, ಟಿವಿಯಲ್ಲೋ ಸಿನಿಮಾ ನೋಡಿದರೆ ಆ ಮಜಾ ಬರುವುದಿಲ್ಲ. ನಾವು ಎಲ್ಲವನ್ನೂ ಪಣಕ್ಕಿಟ್ಟು, ಕಷ್ಟಪಟ್ಟು ಸಿನಿಮಾ ಮಾಡುತ್ತೇವೆ. ಅದನ್ನು ನೀವು ಬೆಳ್ಳಿತೆರೆ ಮೇಲೆ ನೋಡಿದರೆ ನಮಗೆ ತೃಪ್ತಿ ಮತ್ತು ಖುಷಿ’ ಎಂದು ದರ್ಶನ್ ಹೇಳಿದ್ದಾರೆ.