ಬೆಂಗಳೂರು: ಕೃಷಿ ಇಲಾಖೆಯ ರಾಯಭಾರಿಯಾಗಲು ಚಿತ್ರನಟ ದರ್ಶನ್ ಆಸಕ್ತಿ ತೋರಿದ್ದಾರೆ. ಯಾವುದೇ ಸಂಭಾವನೆ ಪಡೆಯದೇ ಕೃಷಿಪರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ತಿಳಿಸಿದ್ದಾರೆ.
ದರ್ಶನ್ ಅವರ ತೋಟದ ಮನೆಗೆ ಬಿ.ಸಿ. ಪಾಟೀಲ್ ಭಾನುವಾರ ಭೇಟಿ ನೀಡಿ ದ್ದರು. ಆಗ ಸಚಿವರು ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದ ಕುರಿತು ನಟನ ಜತೆ ಮಾಹಿತಿ ಹಂಚಿ ಕೊಂಡಿದ್ದರು. ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ದರ್ಶನ್ ತಿಳಿಸಿ ದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.