ನಟಿ, ಸಂಸದೆ ಸುಮಲತಾ ಅಂಬರೀಷ್ ಕ್ಲ್ಯಾಪ್ ಮಾಡುವ ಮುಖಾಂತರ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ನಟರಾದ ರವಿಚಂದ್ರನ್, ಅಭಿಷೇಕ್ ಅಂಬರೀಷ್ ಉಪಸ್ಥಿತರಿದ್ದರು. ಕ್ರಾಂತಿ ಚಿತ್ರವು ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲೂ ತೆರೆಕಾಣಲಿದೆ. 2019ರಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿದ್ದ ‘ಯಜಮಾನ’ ಚಿತ್ರತಂಡವು ‘ಕ್ರಾಂತಿ’ ಸಿನಿಮಾದ ಮೂಲಕ ಇದೀಗ ಮತ್ತೆ ಒಂದಾಗುತ್ತಿದೆ. ಸಿನಿಮಾವನ್ನು ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣ ಮಾಡುತ್ತಿದ್ದು, ವಿ.ಹರಿಕೃಷ್ಣ ನಿರ್ದೇಶಿಸಲಿದ್ದಾರೆ. ಮೀಡಿಯಾ ಹೌಸ್ ಸ್ಟುಡಿಯೋ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.