ಚಿತ್ರಕಥೆ, ನಿರ್ದೇಶನ ಹಾಗೂ ದರ್ಶನ್ ಅವರ ಭರ್ಜರಿ ಡೈಲಾಗ್ಗಳು ಹಾಗೂ ಸಾಹಸ ದೃಶ್ಯಗಳಿಂದ ‘ಯಜಮಾನ’ ಚಿತ್ರ ಯಶಸ್ಸು ಕಂಡಿತ್ತು. ನಿರ್ದೇಶನದ ಜೊತೆಗೆ ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಿದ್ದ ಈ ಚಿತ್ರದ ಎಲ್ಲಾ ಹಾಡುಗಳು ಹಿಟ್ ಆಗಿದ್ದವು. ಇದೇ 11 ಮತ್ತು 12ರಂದು ನಡೆಯಲಿರುವ ಸೈಮಾ ಪ್ರಶಸ್ತಿಯಲ್ಲಿ 2019ರ ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ ಹೀಗೆ 12 ನಾಮಿನೇಷನ್ಗಳನ್ನು ಈ ಸಿನಿಮಾ ಪಡೆದಿದೆ. 2019ರಲ್ಲಿ ದರ್ಶನ್ ಅಭಿನಯದ ‘ಯಜಮಾನ’, ‘ಕುರುಕ್ಷೇತ್ರ’ ಮತ್ತು ‘ಒಡೆಯ’ ಸಿನಿಮಾಗಳು ತೆರೆಕಂಡಿದ್ದವು. 2021ರ ಮಾರ್ಚ್ನಲ್ಲಿ ತೆರೆಕಂಡ ‘ರಾಬರ್ಟ್’ ದರ್ಶನ್ ನಟನೆಯ 53ನೇ ಸಿನಿಮಾ. ಪ್ರಸ್ತುತ ದರ್ಶನ್, ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಿಸಿರುವ ‘ರಾಜವೀರ ಮದಕರಿ ನಾಯಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.