<p>ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶನದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ರಾಜವೀರ ಮದಕರಿನಾಯಕ’ ಚಿತ್ರದ ಮುಹೂರ್ತ ಶುಕ್ರವಾರ ನೆರವೇರಿತು. ಡಿಸೆಂಬರ್ 2ರಂದು ಚಿತ್ರದುರ್ಗದಲ್ಲಿ ಈ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿತ್ತು. ಈ ಮೊದಲು ಚಿತ್ರಕ್ಕೆ ‘ಗಂಡುಗಲಿ ಮದಕರಿನಾಯಕ’ ಎಂದು ಹೆಸರಿಡಲಾಗಿತ್ತು. ಈಗ ‘ರಾಜವೀರ ಮದಕರಿನಾಯಕ’ ಎಂದು ಬದಲಾಯಿಸಲಾಗಿದೆ.</p>.<p>ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಮುಹೂರ್ತಕ್ಕೆ ಚಾಲನೆ ನೀಡಿದರು. ಜೊತೆಗೆ, ರಾಜಮಾತೆಯಾಗಿಯೂ ಅವರು ಕಾಣಿಸಿಕೊಳ್ಳಲಿದ್ದಾರಂತೆ. ಈ ಹಿಂದೆ ಅವರು ದರ್ಶನ್ ನಟಿಸಿದ್ದ ‘ಭೂಪತಿ’, ‘ವಿರಾಟ್’ ಮತ್ತು ‘ಅಂಬರೀಶ’ ಚಿತ್ರದಲ್ಲಿಯೂ ನಟಿಸಿದ್ದರು.</p>.<p>‘ಸಿನಿಮಾದಲ್ಲಿ ನಟಿಸುತ್ತಿರುವ ಎಲ್ಲರೂ ಹಿರಿಯ ಕಲಾವಿದರು. ಅವರು ಹೇಳಿದಂತೆ ನಾನು ಕೇಳಬೇಕು. ದೊಡ್ಡ ತಂಡ ಕಟ್ಟಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ’ ಎಂದು ದರ್ಶನ್ ಖುಷಿ ಹಂಚಿಕೊಂಡರು.</p>.<p>ಬಿ.ಎಲ್. ವೇಣು ಅವರ ಕಾದಂಬರಿ ಆಧಾರಿತ ಕಥೆ ಚಿತ್ರ ಇದು. ಈ ಚಿತ್ರಕ್ಕಾಗಿ ಚಿತ್ರದುರ್ಗದ ಕೋಟೆಯ ಮರುಸೃಷ್ಟಿಗಾಗಿ ದೊಡ್ಡ ಸೆಟ್ ಹಾಕುವ ಸಿದ್ಧತೆಯಲ್ಲಿದೆ ಚಿತ್ರತಂಡ. ಜೊತೆಗೆ, ಹೈದರಾಬಾದ್, ರಾಜಸ್ಥಾನ ಮತ್ತು ಬೆಂಗಳೂರಿನಲ್ಲಿ ಶೂಟಿಂಗ್ ನಡೆಸಲು ಯೋಜಿಸಿದೆ. ರಾಕ್ಲೈನ್ ವೆಂಕಟೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಂಸಲೇಖ ಸಂಗೀತ ಸಂಯೋಜಿಸಿದ್ದಾರೆ.</p>.<p>ದರ್ಶನ್ ನಟಿಸಿದ್ದ ಐತಿಹಾಸಿಕ ಸಿನಿಮಾ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಮತ್ತು ‘ಮುನಿರತ್ನ ಪೌರಾಣಿಕ’ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿವೆ. ಹಾಗಾಗಿ, ಈ ಚಿತ್ರದ ಮೇಲೂ ನಿರೀಕ್ಷೆ ದುಪ್ಪಾಗಿದೆ.</p>.<p class="Briefhead">ವಿಷ್ಣುವರ್ಧನ್ ನಟಿಸಬೇಕಿತ್ತು...</p>.<p>ಈ ಚಿತ್ರ ಮಾಡಬೇಕೆಂಬುದು ರಾಜೇಂದ್ರಸಿಂಗ್ ಬಾಬು ಅವರ ಹಲವು ವರ್ಷದ ಕನಸು. ಹಿಂದೆಯೇ ಅವರು ಚಿತ್ರಕಥೆ ಸಿದ್ಧಪಡಿಸಿಕೊಂಡಿದ್ದರಂತೆ. ‘ಮದಕರಿನಾಯಕ’ನಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರು ನಟಿಸಬೇಕಿತ್ತಂತೆ. ಆದರೆ, ಆರಂಭದಲ್ಲಿಯೇ ಈ ಚಿತ್ರ ನಿಂತುಹೋಯಿತು. ಈ ಚಿತ್ರಕ್ಕೆ ದೊಡ್ಡ ಬಜೆಟ್ ಮುಳುವಾಯಿತಂತೆ.</p>.<p>‘ಸಿನಿಮಾ ನಿರ್ಮಾಣ ಸಂಬಂಧ ಅಂದು ಪತ್ರಿಕೆಗಳಲ್ಲಿ ಜಾಹೀರಾತು ಕೂಡ ನೀಡಲಾಗಿತ್ತು. ಆ ಕಾಲಕ್ಕೆ ಸುಮಾರು ₹ 27 ರಿಂದ 30 ಕೋಟಿ ಬಜೆಟ್ ಬೇಡುತ್ತಿತ್ತು. ಹಾಗಾಗಿ, ಸಿನಿಮಾ ಸ್ಥಗಿತಗೊಂಡಿತು’ ಎನ್ನುವುದು ರಾಜೇಂದ್ರಸಿಂಗ್ ಬಾಬು ಅವರ ವಿವರಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶನದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ರಾಜವೀರ ಮದಕರಿನಾಯಕ’ ಚಿತ್ರದ ಮುಹೂರ್ತ ಶುಕ್ರವಾರ ನೆರವೇರಿತು. ಡಿಸೆಂಬರ್ 2ರಂದು ಚಿತ್ರದುರ್ಗದಲ್ಲಿ ಈ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿತ್ತು. ಈ ಮೊದಲು ಚಿತ್ರಕ್ಕೆ ‘ಗಂಡುಗಲಿ ಮದಕರಿನಾಯಕ’ ಎಂದು ಹೆಸರಿಡಲಾಗಿತ್ತು. ಈಗ ‘ರಾಜವೀರ ಮದಕರಿನಾಯಕ’ ಎಂದು ಬದಲಾಯಿಸಲಾಗಿದೆ.</p>.<p>ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಮುಹೂರ್ತಕ್ಕೆ ಚಾಲನೆ ನೀಡಿದರು. ಜೊತೆಗೆ, ರಾಜಮಾತೆಯಾಗಿಯೂ ಅವರು ಕಾಣಿಸಿಕೊಳ್ಳಲಿದ್ದಾರಂತೆ. ಈ ಹಿಂದೆ ಅವರು ದರ್ಶನ್ ನಟಿಸಿದ್ದ ‘ಭೂಪತಿ’, ‘ವಿರಾಟ್’ ಮತ್ತು ‘ಅಂಬರೀಶ’ ಚಿತ್ರದಲ್ಲಿಯೂ ನಟಿಸಿದ್ದರು.</p>.<p>‘ಸಿನಿಮಾದಲ್ಲಿ ನಟಿಸುತ್ತಿರುವ ಎಲ್ಲರೂ ಹಿರಿಯ ಕಲಾವಿದರು. ಅವರು ಹೇಳಿದಂತೆ ನಾನು ಕೇಳಬೇಕು. ದೊಡ್ಡ ತಂಡ ಕಟ್ಟಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ’ ಎಂದು ದರ್ಶನ್ ಖುಷಿ ಹಂಚಿಕೊಂಡರು.</p>.<p>ಬಿ.ಎಲ್. ವೇಣು ಅವರ ಕಾದಂಬರಿ ಆಧಾರಿತ ಕಥೆ ಚಿತ್ರ ಇದು. ಈ ಚಿತ್ರಕ್ಕಾಗಿ ಚಿತ್ರದುರ್ಗದ ಕೋಟೆಯ ಮರುಸೃಷ್ಟಿಗಾಗಿ ದೊಡ್ಡ ಸೆಟ್ ಹಾಕುವ ಸಿದ್ಧತೆಯಲ್ಲಿದೆ ಚಿತ್ರತಂಡ. ಜೊತೆಗೆ, ಹೈದರಾಬಾದ್, ರಾಜಸ್ಥಾನ ಮತ್ತು ಬೆಂಗಳೂರಿನಲ್ಲಿ ಶೂಟಿಂಗ್ ನಡೆಸಲು ಯೋಜಿಸಿದೆ. ರಾಕ್ಲೈನ್ ವೆಂಕಟೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಂಸಲೇಖ ಸಂಗೀತ ಸಂಯೋಜಿಸಿದ್ದಾರೆ.</p>.<p>ದರ್ಶನ್ ನಟಿಸಿದ್ದ ಐತಿಹಾಸಿಕ ಸಿನಿಮಾ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಮತ್ತು ‘ಮುನಿರತ್ನ ಪೌರಾಣಿಕ’ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿವೆ. ಹಾಗಾಗಿ, ಈ ಚಿತ್ರದ ಮೇಲೂ ನಿರೀಕ್ಷೆ ದುಪ್ಪಾಗಿದೆ.</p>.<p class="Briefhead">ವಿಷ್ಣುವರ್ಧನ್ ನಟಿಸಬೇಕಿತ್ತು...</p>.<p>ಈ ಚಿತ್ರ ಮಾಡಬೇಕೆಂಬುದು ರಾಜೇಂದ್ರಸಿಂಗ್ ಬಾಬು ಅವರ ಹಲವು ವರ್ಷದ ಕನಸು. ಹಿಂದೆಯೇ ಅವರು ಚಿತ್ರಕಥೆ ಸಿದ್ಧಪಡಿಸಿಕೊಂಡಿದ್ದರಂತೆ. ‘ಮದಕರಿನಾಯಕ’ನಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರು ನಟಿಸಬೇಕಿತ್ತಂತೆ. ಆದರೆ, ಆರಂಭದಲ್ಲಿಯೇ ಈ ಚಿತ್ರ ನಿಂತುಹೋಯಿತು. ಈ ಚಿತ್ರಕ್ಕೆ ದೊಡ್ಡ ಬಜೆಟ್ ಮುಳುವಾಯಿತಂತೆ.</p>.<p>‘ಸಿನಿಮಾ ನಿರ್ಮಾಣ ಸಂಬಂಧ ಅಂದು ಪತ್ರಿಕೆಗಳಲ್ಲಿ ಜಾಹೀರಾತು ಕೂಡ ನೀಡಲಾಗಿತ್ತು. ಆ ಕಾಲಕ್ಕೆ ಸುಮಾರು ₹ 27 ರಿಂದ 30 ಕೋಟಿ ಬಜೆಟ್ ಬೇಡುತ್ತಿತ್ತು. ಹಾಗಾಗಿ, ಸಿನಿಮಾ ಸ್ಥಗಿತಗೊಂಡಿತು’ ಎನ್ನುವುದು ರಾಜೇಂದ್ರಸಿಂಗ್ ಬಾಬು ಅವರ ವಿವರಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>