<p>ಫೆಬ್ರುವರಿ.16ರಂದು ಕನ್ನಡ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಹುಟ್ಟುಹಬ್ಬವಾಗಿತ್ತು. ಆ ದಿನ ದರ್ಶನ್ ಅವರ ಅಭಿಮಾನಿಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಆಯಾ ಊರಿನಲ್ಲಿರುವ ಅನಾಥಾಶ್ರಮಗಳಿಗೆ ಊಟ ವಿತರಣೆ, ವಿದ್ಯಾರ್ಥಿಗಳಿಗೆ ಬಟ್ಟೆ–ಪುಸ್ತಕ, ರಕ್ತದಾನ ಶಿಬಿರ ಹೀಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ನಡೆಸಿದ್ದರು. </p>.<p>ಆ ಬೆನ್ನಲ್ಲೆ ನಟ ದರ್ಶನ್ ಅವರ ಪುತ್ರ ವಿನೀಶ್ ತಂದೆಯ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಈ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ದರ್ಶನ್ ಮಗ ವಿನೀಶ್ ಅಪ್ಪನ 49ನೇ ಹುಟ್ಟುಹಬ್ಬದ ಪ್ರಯುಕ್ತ ಬುದ್ಧಿಮಾಂದ್ಯ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಉಡುಗೊರೆ ನೀಡಿದ್ದಾರೆ.</p><p>ಮನೋವಿಕಾಸ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿರುವ ಬುದ್ಧಿಮಾಂದ್ಯ ಮಕ್ಕಳಿಗೆ ಬಟ್ಟೆ ಹಾಗೂ ಆಟದ ವಸ್ತುಗಳನ್ನು ವಿತರಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ನೋಡಿದ ದರ್ಶನ್ ಅಭಿಮಾನಿಗಳು, ‘ವಿನೀಶ್ ತಂದೆಗೆ ತಕ್ಕ ಮಗ’, ‘ಒಳ್ಳೆಯ ಕೆಲಸ ಮಾಡುತ್ತಿರುವೆ ವಿನೀಶ್’, ‘ನಿಮ್ಮ ಮೇಲೆ ಹೆಮ್ಮೆ ಜಾಸ್ತಿಯಾಗಿದೆ’ ಎಂದು ಕಮೆಂಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಫೆಬ್ರುವರಿ.16ರಂದು ಕನ್ನಡ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಹುಟ್ಟುಹಬ್ಬವಾಗಿತ್ತು. ಆ ದಿನ ದರ್ಶನ್ ಅವರ ಅಭಿಮಾನಿಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಆಯಾ ಊರಿನಲ್ಲಿರುವ ಅನಾಥಾಶ್ರಮಗಳಿಗೆ ಊಟ ವಿತರಣೆ, ವಿದ್ಯಾರ್ಥಿಗಳಿಗೆ ಬಟ್ಟೆ–ಪುಸ್ತಕ, ರಕ್ತದಾನ ಶಿಬಿರ ಹೀಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ನಡೆಸಿದ್ದರು. </p>.<p>ಆ ಬೆನ್ನಲ್ಲೆ ನಟ ದರ್ಶನ್ ಅವರ ಪುತ್ರ ವಿನೀಶ್ ತಂದೆಯ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಈ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ದರ್ಶನ್ ಮಗ ವಿನೀಶ್ ಅಪ್ಪನ 49ನೇ ಹುಟ್ಟುಹಬ್ಬದ ಪ್ರಯುಕ್ತ ಬುದ್ಧಿಮಾಂದ್ಯ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಉಡುಗೊರೆ ನೀಡಿದ್ದಾರೆ.</p><p>ಮನೋವಿಕಾಸ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿರುವ ಬುದ್ಧಿಮಾಂದ್ಯ ಮಕ್ಕಳಿಗೆ ಬಟ್ಟೆ ಹಾಗೂ ಆಟದ ವಸ್ತುಗಳನ್ನು ವಿತರಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ನೋಡಿದ ದರ್ಶನ್ ಅಭಿಮಾನಿಗಳು, ‘ವಿನೀಶ್ ತಂದೆಗೆ ತಕ್ಕ ಮಗ’, ‘ಒಳ್ಳೆಯ ಕೆಲಸ ಮಾಡುತ್ತಿರುವೆ ವಿನೀಶ್’, ‘ನಿಮ್ಮ ಮೇಲೆ ಹೆಮ್ಮೆ ಜಾಸ್ತಿಯಾಗಿದೆ’ ಎಂದು ಕಮೆಂಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>