ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಮಾನಿಗಳ ಕೋಪ ಶಮನಕ್ಕೆ ನಟ ದರ್ಶನ್‌ ಯತ್ನ

Last Updated 1 ಜುಲೈ 2019, 8:53 IST
ಅಕ್ಷರ ಗಾತ್ರ

ಬೆಂಗಳೂರು: ‘ಮುನಿರತ್ನ ಕುರುಕ್ಷೇತ್ರ’ ಬಹುತಾರಾಗಣ ಇರುವ ಚಿತ್ರ. ಜುಲೈ 7ರಂದು ಅದ್ದೂರಿಯಾಗಿ ಆಡಿಯೊ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ಈ ನಡುವೆಯೇ ಕಾರ್ಯಕ್ರಮದ ಪಾಸ್‌ಗಳ ಮೇಲೆ ಸಿನಿಮಾದಲ್ಲಿ ನಟಿಸಿರುವ ಯಾವೊಬ್ಬ ತಾರೆಯರ ಫೋಟೊವನ್ನೂ ಮುದ್ರಿಸಿಲ್ಲ ಎನ್ನುವುದು ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇದಕ್ಕೆ ದರ್ಶನ್‌ ಅವರೇ ಟ್ವಿಟರ್‌ನಲ್ಲಿ ಉತ್ತರಿಸಿ ಅಭಿಮಾನಿಗಳ ಕೋಪ ಶಮನಕ್ಕೆ ಮುಂದಾಗಿದ್ದಾರೆ.

‘ಕುರುಕ್ಷೇತ್ರ ಎನ್ನುವುದು ಬಹು ತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೊಗಳನ್ನು ಪಾಸ್‌ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರ ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೊ ಬಿಡುಗಡೆಯಲ್ಲಿ ಪಾಲ್ಗೊಳ್ಳಿ’ ಎಂದು ದರ್ಶನ್‌ ಅವರು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT