<p>ದಾವಣಗೆರೆ: ‘2021ರಿಂದ ಸಿನಿ ಪ್ರಯಾಣ ಆರಂಭಿಸಿದ್ದೇನೆ. ಇದುವರೆಗೂ ದಾವಣಗೆರೆಯ ಯಾವುದೇ ಕಾರ್ಯಕ್ರಮಗಳಲ್ಲೂ ನಾನು ಭಾಗವಹಿಸಿರಲಿಲ್ಲ. ತುಂಬಾ ಗೌರವದಿಂದ ಆಹ್ವಾನಿಸಿದ್ದರಿಂದ ಈ ಕಾರ್ಯಕ್ರಮಕ್ಕೆ ಆಗಮಿಸಿದೆ’ ಎಂದು ನಟಿ ಮಲೈಕಾ ವಸುಪಾಲ್ ಹೇಳಿದರು.</p>.<p>ನಗರದ ಶಿವಯೋಗಾಶ್ರಮದಲ್ಲಿ ಶನಿವಾರ ಆಯೋಜಿಸಿದ್ದ ‘ಸಿನಿಮಾ ಸಿರಿ– 25’ ಸುಮಧುರ ಗೀತೆಗಳ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿರಿಯರ ಮಧ್ಯ ಕುಳಿತಿರುವುದು ಹೆಮ್ಮೆಯ ವಿಷಯ. ಕೌಟುಂಬಿಕ ಹಿನ್ನೆಲೆಗಿಂತ ವೈಯಕ್ತಿಕ ಸಾಧನೆ ಮುಖ್ಯ. ಸಾಕಷ್ಟು ಸಿನಿಮಾಗಳು ಕೈಯಲ್ಲಿವೆ. ಇಷ್ಟು ವರ್ಷಗಳ ಕಾಲ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವುದು ಪ್ರೇರಣಾದಾಯಕ’ ಎಂದರು.</p>.<p>ಹತ್ತಾರು ಹಾಡುಗಳನ್ನು ಹಾಡುವ ಮೂಲಕ ಕಲಾವಿದರು ಪ್ರೇಕ್ಷಕರನ್ನು ರಂಜಿಸಿದರು.</p>.<p>ಸಿನಿಮಾ ಸಿರಿಯ ಅಧ್ಯಕ್ಷ ಅಂದನೂರು ಮುಪ್ಪಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬೆಳ್ಳಿಹಬ್ಬದ ಕಾರ್ಯಕಾರಿ ಸಮಿತಿ ಸದಸ್ಯರಾದ ಸುರಭಿ ಶಿವಮೂರ್ತಿ, ಜಿ.ಎಸ್. ನಾಗಪ್ರಕಾಶ್, ಟಿ.ಎಂ. ಪಂಚಾಕ್ಷರಯ್ಯ, ಪ್ರಮುಖರಾದ ಸಾಲಿಗ್ರಾಮ ಗಣೇಶ್ ಶೆಣೈ, ಎಂ.ಜಿ. ಜಗದೀಶ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-43-151645300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘2021ರಿಂದ ಸಿನಿ ಪ್ರಯಾಣ ಆರಂಭಿಸಿದ್ದೇನೆ. ಇದುವರೆಗೂ ದಾವಣಗೆರೆಯ ಯಾವುದೇ ಕಾರ್ಯಕ್ರಮಗಳಲ್ಲೂ ನಾನು ಭಾಗವಹಿಸಿರಲಿಲ್ಲ. ತುಂಬಾ ಗೌರವದಿಂದ ಆಹ್ವಾನಿಸಿದ್ದರಿಂದ ಈ ಕಾರ್ಯಕ್ರಮಕ್ಕೆ ಆಗಮಿಸಿದೆ’ ಎಂದು ನಟಿ ಮಲೈಕಾ ವಸುಪಾಲ್ ಹೇಳಿದರು.</p>.<p>ನಗರದ ಶಿವಯೋಗಾಶ್ರಮದಲ್ಲಿ ಶನಿವಾರ ಆಯೋಜಿಸಿದ್ದ ‘ಸಿನಿಮಾ ಸಿರಿ– 25’ ಸುಮಧುರ ಗೀತೆಗಳ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿರಿಯರ ಮಧ್ಯ ಕುಳಿತಿರುವುದು ಹೆಮ್ಮೆಯ ವಿಷಯ. ಕೌಟುಂಬಿಕ ಹಿನ್ನೆಲೆಗಿಂತ ವೈಯಕ್ತಿಕ ಸಾಧನೆ ಮುಖ್ಯ. ಸಾಕಷ್ಟು ಸಿನಿಮಾಗಳು ಕೈಯಲ್ಲಿವೆ. ಇಷ್ಟು ವರ್ಷಗಳ ಕಾಲ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವುದು ಪ್ರೇರಣಾದಾಯಕ’ ಎಂದರು.</p>.<p>ಹತ್ತಾರು ಹಾಡುಗಳನ್ನು ಹಾಡುವ ಮೂಲಕ ಕಲಾವಿದರು ಪ್ರೇಕ್ಷಕರನ್ನು ರಂಜಿಸಿದರು.</p>.<p>ಸಿನಿಮಾ ಸಿರಿಯ ಅಧ್ಯಕ್ಷ ಅಂದನೂರು ಮುಪ್ಪಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬೆಳ್ಳಿಹಬ್ಬದ ಕಾರ್ಯಕಾರಿ ಸಮಿತಿ ಸದಸ್ಯರಾದ ಸುರಭಿ ಶಿವಮೂರ್ತಿ, ಜಿ.ಎಸ್. ನಾಗಪ್ರಕಾಶ್, ಟಿ.ಎಂ. ಪಂಚಾಕ್ಷರಯ್ಯ, ಪ್ರಮುಖರಾದ ಸಾಲಿಗ್ರಾಮ ಗಣೇಶ್ ಶೆಣೈ, ಎಂ.ಜಿ. ಜಗದೀಶ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-43-151645300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>