<p>ನಟಿ, ರೂಪದರ್ಶಿ ಖುಷಿ ಮುಖರ್ಜಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ನೀಡಿರುವ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಸೂರ್ಯಕುಮಾರ್ ಯಾದವ್ ಅವರು ಈ ಹಿಂದೆ ನನಗೆ ಆಗಾಗ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಹೇಳಿಕೊಂಡಿದ್ದ ನಟಿ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. </p>.<p>'ಟೈಮ್ಸ್ ಆಫ್ ಇಂಡಿಯಾ' ವರದಿಯ ಪ್ರಕಾರ,ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಫೈಜಾನ್ ಅನ್ಸಾರಿ ಅವರು ಜನವರಿ 13 ರಂದು ಖುಷಿ ಮುಖರ್ಜಿ ವಿರುದ್ಧ ₹ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ಅನ್ಸಾರಿ ಅವರು, ಘಾಜಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖುಷಿ ಅವರ ಹೇಳಿಕೆಗಳು ಸುಳ್ಳು ಮತ್ತು ಸೂರ್ಯಕುಮಾರ್ ಯಾದವ್ ಅವರ ಘನತೆಗೆ ಧಕ್ಕೆ ತರುವಂತಿವೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಖುಷಿ ಮುಖರ್ಜಿ ಅವರು ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ನೀಡಿದ ಹೇಳಿಕೆಗಳು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರ. ಅಂತರರಾಷ್ಟ್ರೀಯ ಕ್ರಿಕೆಟಿಗನ ಘನತೆಗೆ ಇದರಿಂದ ಹಾನಿಯಾಗಬಹುದು. ಹಾಗಾಗಿ, ನಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. </p>.<p>ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖುಷಿ ಮುಖರ್ಜಿ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಬೇಕೆಂದು ನಾವು ಬಯಸುತ್ತೇವೆ. ಲಿಖಿತ ದೂರಿನಲ್ಲಿಯೂ ಈ ಬಗ್ಗೆ ಉಲ್ಲೇಖಿಸಿದ್ದೇನೆ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದೇನೆ. ಅವರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಬೇಕು. ಇನ್ಸ್ಟಾಗ್ರಾಮ್ನಲ್ಲಿ ಎರಡು ದಶಲಕ್ಷಕ್ಕೂ ಹೆಚ್ಚು ಜನರು ನನ್ನನ್ನು ಫಾಲೋ ಮಾಡುತ್ತಾರೆ. ಕೋಟ್ಯಂತರ ಜನ ನನ್ನ ವಿಡಿಯೋಗಳನ್ನು ವೀಕ್ಷಿಸುತ್ತಾರೆ ಎಂದು ಅನ್ಸಾರಿ ಹೇಳಿದ್ದಾರೆ.</p>.<p>ಈ ವಿಷಯವನ್ನು ಜಗತ್ತಿನ ಮೂಲೆ ಮೂಲೆಗೂ ಕೊಂಡೊಯ್ಯುವುದು ನನ್ನ ಜವಾಬ್ದಾರಿ. ನಾನು ಯಾರಿಗೂ ಹೆದರುವುದಿಲ್ಲ. ನನಗೆ ನ್ಯಾಯ ಮಾತ್ರ ಬೇಕು. ಎಷ್ಟೇ ತೊಂದರೆಗಳು ಎದುರಾದರೂ ಖುಷಿ ಮುಖರ್ಜಿ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಎಲ್ಲವನ್ನೂ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಹಿಂದೆ ನಾವು ಪೂನಂ ಪಾಂಡೆ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೆವು ಎಂದು ಅನ್ಸಾರಿ ತಿಳಿಸಿದ್ದಾರೆ.</p>.<h2>ಖುಷಿ ಮುಖರ್ಜಿ ಹೇಳಿದ್ದೇನು?</h2><h2></h2>.<p>ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಖುಷಿ ಮುಖರ್ಜಿ, ‘ಸೂರ್ಯಕುಮಾರ್ ಅವರು ಈ ಹಿಂದೆ ಆಗಾಗ ನನಗೆ ಸಂದೇಶ ಕಳುಹಿಸುತ್ತಿದ್ದರು, ಆದರೆ, ಈಗ ಅವರು ನನ್ನ ಸಂಪರ್ಕದಲ್ಲಿಲ್ಲ’ ಎಂದು ಹೇಳಿದ್ದರು. </p>.<p>ಕ್ರಿಕೆಟಿಗರೊಂದಿಗೆ ಡೇಟಿಂಗ್ ಮಾಡಲು ಬಯಸುತ್ತೀರಾ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖುಷಿ, ‘ನಾನು ಯಾವುದೇ ಆಟಗಾರನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ, ಈ ಹಿಂದೆ ಕೆಲವು ಕ್ರಿಕೆಟಿಗರು ನನ್ನ ಸಂಪರ್ಕದಲ್ಲಿದ್ದರು. ಸೂರ್ಯಕುಮಾರ್ ಯಾದವ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು’ ಎಂದು ಖುಷಿ ತಿಳಿಸಿದ್ದರು.</p>.<p>‘ಈಗ ನಾವು ಹೆಚ್ಚು ಮಾತನಾಡುವುದಿಲ್ಲ ಮತ್ತು ಯಾರೊಂದಿಗೂ ಸಂಪರ್ಕ ಹೊಂದುವುದು ನನಗೆ ಇಷ್ಟವಿಲ್ಲ’ ಎಂದೂ ಅವರು ಹೇಳಿದ್ದರು.</p>.<h2>ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದ ನಟಿ</h2><p>ವಿವಾದದ ಬೆನ್ನಲೇ ಖುಷಿ ಮುಖರ್ಜಿ 'ಎನ್ಡಿಟಿವಿ'ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದರು. ಸೂರ್ಯಕುಮಾರ್ ಯಾದವ್ ಅವರೊಂದಿಗೆ ಯಾವುದೇ ಪ್ರಣಯ ಸಂಬಂಧ ಇಲ್ಲ ಎಂದಿದ್ದ ಅವರು, ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದ್ದರು. </p>.ಟೀಂ ಇಂಡಿಯಾದ ನಾಯಕ ನನಗೆ ಆಗಾಗ ಸಂದೇಶ ಕಳಿಸುತ್ತಿದ್ದರು: ನಟಿ ಖುಷಿ ಮುಖರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟಿ, ರೂಪದರ್ಶಿ ಖುಷಿ ಮುಖರ್ಜಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ನೀಡಿರುವ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಸೂರ್ಯಕುಮಾರ್ ಯಾದವ್ ಅವರು ಈ ಹಿಂದೆ ನನಗೆ ಆಗಾಗ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಹೇಳಿಕೊಂಡಿದ್ದ ನಟಿ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. </p>.<p>'ಟೈಮ್ಸ್ ಆಫ್ ಇಂಡಿಯಾ' ವರದಿಯ ಪ್ರಕಾರ,ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಫೈಜಾನ್ ಅನ್ಸಾರಿ ಅವರು ಜನವರಿ 13 ರಂದು ಖುಷಿ ಮುಖರ್ಜಿ ವಿರುದ್ಧ ₹ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ಅನ್ಸಾರಿ ಅವರು, ಘಾಜಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖುಷಿ ಅವರ ಹೇಳಿಕೆಗಳು ಸುಳ್ಳು ಮತ್ತು ಸೂರ್ಯಕುಮಾರ್ ಯಾದವ್ ಅವರ ಘನತೆಗೆ ಧಕ್ಕೆ ತರುವಂತಿವೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಖುಷಿ ಮುಖರ್ಜಿ ಅವರು ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ನೀಡಿದ ಹೇಳಿಕೆಗಳು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರ. ಅಂತರರಾಷ್ಟ್ರೀಯ ಕ್ರಿಕೆಟಿಗನ ಘನತೆಗೆ ಇದರಿಂದ ಹಾನಿಯಾಗಬಹುದು. ಹಾಗಾಗಿ, ನಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. </p>.<p>ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖುಷಿ ಮುಖರ್ಜಿ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಬೇಕೆಂದು ನಾವು ಬಯಸುತ್ತೇವೆ. ಲಿಖಿತ ದೂರಿನಲ್ಲಿಯೂ ಈ ಬಗ್ಗೆ ಉಲ್ಲೇಖಿಸಿದ್ದೇನೆ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದೇನೆ. ಅವರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಬೇಕು. ಇನ್ಸ್ಟಾಗ್ರಾಮ್ನಲ್ಲಿ ಎರಡು ದಶಲಕ್ಷಕ್ಕೂ ಹೆಚ್ಚು ಜನರು ನನ್ನನ್ನು ಫಾಲೋ ಮಾಡುತ್ತಾರೆ. ಕೋಟ್ಯಂತರ ಜನ ನನ್ನ ವಿಡಿಯೋಗಳನ್ನು ವೀಕ್ಷಿಸುತ್ತಾರೆ ಎಂದು ಅನ್ಸಾರಿ ಹೇಳಿದ್ದಾರೆ.</p>.<p>ಈ ವಿಷಯವನ್ನು ಜಗತ್ತಿನ ಮೂಲೆ ಮೂಲೆಗೂ ಕೊಂಡೊಯ್ಯುವುದು ನನ್ನ ಜವಾಬ್ದಾರಿ. ನಾನು ಯಾರಿಗೂ ಹೆದರುವುದಿಲ್ಲ. ನನಗೆ ನ್ಯಾಯ ಮಾತ್ರ ಬೇಕು. ಎಷ್ಟೇ ತೊಂದರೆಗಳು ಎದುರಾದರೂ ಖುಷಿ ಮುಖರ್ಜಿ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಎಲ್ಲವನ್ನೂ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಹಿಂದೆ ನಾವು ಪೂನಂ ಪಾಂಡೆ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೆವು ಎಂದು ಅನ್ಸಾರಿ ತಿಳಿಸಿದ್ದಾರೆ.</p>.<h2>ಖುಷಿ ಮುಖರ್ಜಿ ಹೇಳಿದ್ದೇನು?</h2><h2></h2>.<p>ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಖುಷಿ ಮುಖರ್ಜಿ, ‘ಸೂರ್ಯಕುಮಾರ್ ಅವರು ಈ ಹಿಂದೆ ಆಗಾಗ ನನಗೆ ಸಂದೇಶ ಕಳುಹಿಸುತ್ತಿದ್ದರು, ಆದರೆ, ಈಗ ಅವರು ನನ್ನ ಸಂಪರ್ಕದಲ್ಲಿಲ್ಲ’ ಎಂದು ಹೇಳಿದ್ದರು. </p>.<p>ಕ್ರಿಕೆಟಿಗರೊಂದಿಗೆ ಡೇಟಿಂಗ್ ಮಾಡಲು ಬಯಸುತ್ತೀರಾ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖುಷಿ, ‘ನಾನು ಯಾವುದೇ ಆಟಗಾರನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ, ಈ ಹಿಂದೆ ಕೆಲವು ಕ್ರಿಕೆಟಿಗರು ನನ್ನ ಸಂಪರ್ಕದಲ್ಲಿದ್ದರು. ಸೂರ್ಯಕುಮಾರ್ ಯಾದವ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು’ ಎಂದು ಖುಷಿ ತಿಳಿಸಿದ್ದರು.</p>.<p>‘ಈಗ ನಾವು ಹೆಚ್ಚು ಮಾತನಾಡುವುದಿಲ್ಲ ಮತ್ತು ಯಾರೊಂದಿಗೂ ಸಂಪರ್ಕ ಹೊಂದುವುದು ನನಗೆ ಇಷ್ಟವಿಲ್ಲ’ ಎಂದೂ ಅವರು ಹೇಳಿದ್ದರು.</p>.<h2>ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದ ನಟಿ</h2><p>ವಿವಾದದ ಬೆನ್ನಲೇ ಖುಷಿ ಮುಖರ್ಜಿ 'ಎನ್ಡಿಟಿವಿ'ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದರು. ಸೂರ್ಯಕುಮಾರ್ ಯಾದವ್ ಅವರೊಂದಿಗೆ ಯಾವುದೇ ಪ್ರಣಯ ಸಂಬಂಧ ಇಲ್ಲ ಎಂದಿದ್ದ ಅವರು, ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದ್ದರು. </p>.ಟೀಂ ಇಂಡಿಯಾದ ನಾಯಕ ನನಗೆ ಆಗಾಗ ಸಂದೇಶ ಕಳಿಸುತ್ತಿದ್ದರು: ನಟಿ ಖುಷಿ ಮುಖರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>