ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ಅದ್ದೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಚಿತ್ರೀಕರಣದಲ್ಲಿ ನಾಯಕಿ ಕೀರ್ತಿ ಕಲ್ಕೆರೆ, ಎಸ್.ನಾರಾಯಣ್, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ, ಪೃಥ್ವಿರಾಜ್ ಅವರೂ ಭಾಗವಹಿಸಿದ್ದರು. ಇದರೊಂದಿಗೆ ಚಿತ್ರದ ಶೇ 40ರಷ್ಟು ಚಿತ್ರೀಕರಣ ಮುಗಿದಿದೆ. ಚಿತ್ರಕ್ಕೆ ಚರಣ್ ಅರ್ಜುನ್ ಅವರ ಸಂಗೀತ, ರಿಯಲ್ ಸತೀಶ್ ಅವರ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿಕ್ ಅವರ ಸಂಕಲನ, ಜನಾರ್ದನ್ ಅವರ ಕಲಾ ನಿರ್ದೇಶನವಿದೆ. ಸಾಧುಕೋಕಿಲ, ಪವಿತ್ರಾ ಲೋಕೇಶ್, ರವಿ ರಾಮ್ಕುಮಾರ್ ಹಾಗೂ ಇತರರು ತಾರಾ ಬಳಗದಲ್ಲಿದ್ದಾರೆ.