<p>ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ ‘ಧಮ್’ ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ.ಆರ್.ಆರ್. ನಿರ್ದೇಶಿಸಿದ್ದಾರೆ.</p>.<p>ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನಡೆಯಿತು.</p>.<p>‘ನಾನು ಬಾಲನಟನಾಗಿ ‘ಹಾತಿ ಮೇರೆ ಸಾತಿ’ ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು. ಅವರಿಗೆ ನಾನು ಕನ್ನಡ ಚಿತ್ರವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಈ ಚಿತ್ರ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ’ ಎಂದರು.</p>.<p>‘ಈ ಚಿತ್ರದ ನಾಯಕರಾಗಿ ಸಂಚಾರಿ ವಿಜಯ್ ಮಾಡಬೇಕಿತ್ತು. ಕಾರಣಾಂತರದಿಂದ ಅದು ಆಗಲಿಲ್ಲ. ನಂತರ ಶ್ರೀಜಿತ್ ಆಯ್ಕೆಯಾದರು. ಎರೀನ್ ಅಧಿಕಾರಿ ಈ ಚಿತ್ರದ ನಾಯಕಿ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್ ತಾರಾಬಳಗದಲ್ಲಿದ್ದಾರೆ. ರಿಹಾನ್ ಅಹಮದ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇಳಯರಾಜ ಅವರ ಬಳಿ ಕಾರ್ಯ ನಿರ್ವಹಿಸಿರುವ ಜೀವ ವರ್ಷಿಣಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ’ ಎಂದರು ನಿರ್ದೇಶಕ ವಿ.ಆರ್.ಆರ್.</p>.<p>‘ನನ್ನ ಸ್ನೇಹಿತನ ಮೂಲಕ ನಿರ್ದೇಶಕರ ಪರಿಚಯವಾಯಿತು. ವಿ.ಆರ್.ಆರ್. ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದು ಸಂತೋಷವಾಗಿದೆ. ನಾನು ಈ ಹಿಂದೆ ‘ರಂಗ್ ಬಿ ರಂಗಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದೆ. ಇದು ಎರಡನೇ ಚಿತ್ರ. ಆ್ಯಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಾಯಕ ಶ್ರೀಜಿತ್.</p>.<p>‘ನಾನು ಮೂಲತಃ ಬಂಗಾಳದವಳು. ಬಂಗಾಳಿ, ತೆಲುಗು, ಹಿಂದಿ ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಮೊದಲ ಚಿತ್ರ’ ಎಂದರು ನಾಯಕಿ ಎರೀನ್ ಅಧಿಕಾರಿ.</p>.<p>ಚಿತ್ರದಲ್ಲಿ ನಟಿಸಿರುವ ನಾಗೇಶ್ವರರಾವ್, ಸಂಗೀತ ನೀಡಿರುವ ಜೀವವರ್ಷಿಣಿ "ಧಮ್" ಚಿತ್ರದ ಬಗ್ಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ ‘ಧಮ್’ ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ.ಆರ್.ಆರ್. ನಿರ್ದೇಶಿಸಿದ್ದಾರೆ.</p>.<p>ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನಡೆಯಿತು.</p>.<p>‘ನಾನು ಬಾಲನಟನಾಗಿ ‘ಹಾತಿ ಮೇರೆ ಸಾತಿ’ ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು. ಅವರಿಗೆ ನಾನು ಕನ್ನಡ ಚಿತ್ರವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಈ ಚಿತ್ರ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ’ ಎಂದರು.</p>.<p>‘ಈ ಚಿತ್ರದ ನಾಯಕರಾಗಿ ಸಂಚಾರಿ ವಿಜಯ್ ಮಾಡಬೇಕಿತ್ತು. ಕಾರಣಾಂತರದಿಂದ ಅದು ಆಗಲಿಲ್ಲ. ನಂತರ ಶ್ರೀಜಿತ್ ಆಯ್ಕೆಯಾದರು. ಎರೀನ್ ಅಧಿಕಾರಿ ಈ ಚಿತ್ರದ ನಾಯಕಿ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್ ತಾರಾಬಳಗದಲ್ಲಿದ್ದಾರೆ. ರಿಹಾನ್ ಅಹಮದ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇಳಯರಾಜ ಅವರ ಬಳಿ ಕಾರ್ಯ ನಿರ್ವಹಿಸಿರುವ ಜೀವ ವರ್ಷಿಣಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ’ ಎಂದರು ನಿರ್ದೇಶಕ ವಿ.ಆರ್.ಆರ್.</p>.<p>‘ನನ್ನ ಸ್ನೇಹಿತನ ಮೂಲಕ ನಿರ್ದೇಶಕರ ಪರಿಚಯವಾಯಿತು. ವಿ.ಆರ್.ಆರ್. ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದು ಸಂತೋಷವಾಗಿದೆ. ನಾನು ಈ ಹಿಂದೆ ‘ರಂಗ್ ಬಿ ರಂಗಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದೆ. ಇದು ಎರಡನೇ ಚಿತ್ರ. ಆ್ಯಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಾಯಕ ಶ್ರೀಜಿತ್.</p>.<p>‘ನಾನು ಮೂಲತಃ ಬಂಗಾಳದವಳು. ಬಂಗಾಳಿ, ತೆಲುಗು, ಹಿಂದಿ ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಮೊದಲ ಚಿತ್ರ’ ಎಂದರು ನಾಯಕಿ ಎರೀನ್ ಅಧಿಕಾರಿ.</p>.<p>ಚಿತ್ರದಲ್ಲಿ ನಟಿಸಿರುವ ನಾಗೇಶ್ವರರಾವ್, ಸಂಗೀತ ನೀಡಿರುವ ಜೀವವರ್ಷಿಣಿ "ಧಮ್" ಚಿತ್ರದ ಬಗ್ಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>