<p><strong>ಬೆಂಗಳೂರು</strong>: ಆನಂದ್ ರೈ ನಿರ್ದೇಶನದ ನಟ ಧನುಷ್ ಮತ್ತು ಸೋನಂ ಕಪೂರ್ ಅಭಿಯನದ ರಾಂಝಾನಾ ಸಿನಿಮಾವು ರೀ ರಿಲೀಸ್ ಆಗಿದೆ. </p><p>ಈ ನಡುವೆ ರೀ ರಿಲೀಸ್ ಚಿತ್ರದ ಬಗ್ಗೆ ನಾಯಕ ನಟ ಧನುಷ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>2013ರಲ್ಲಿ ಬಿಡುಗಡೆಯಾಗಿದ್ದ ರಾಂಝಾನಾ ಚಿತ್ರವನ್ನು ಕಳೆದ ವಾರ ಮತ್ತೆ ರೀ ರಿಲೀಸ್ ಮಾಡಲಾಗಿದೆ. ಆದರೆ ಚಿತ್ರದಲ್ಲಿ ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನವನ್ನು ಬಳಸಿ ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ಸತ್ತ ನಾಯಕನನ್ನು ಮತ್ತೆ ಬದುಕಿಸಲಾಗಿದೆ. ಇದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ ಎಂದು ಧನುಷ್ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ನಟಿ ರಮ್ಯಾಗೆ ಬೆದರಿಕೆ; ಮತ್ತಿಬ್ಬರ ಬಂಧನ: ಬೇಟೆ ಮುಂದುವರೆದಿದೆ ಎಂದ ಕಮಿಷನರ್.Sandalwood: ಲವ್ ಮಾಕ್ಟೇಲ್–3ಗೆ ಸಜ್ಜಾದ ಕೃಷ್ಣ ಜೋಡಿ. <p>'ಎಐ ಬದಲಾವಣೆಯಿಂದಾಗಿ ಚಿತ್ರದ ಆತ್ಮವೇ ಕಸಿದುಕೊಂಡಿತಿದೆ. ನನ್ನ ಆಕ್ಷೇಪಣೆಯ ಹೊರತಾಗಿಯೂ ಈ ಚಿತ್ರದಲ್ಲಿ ಬದಲಾವಣೆ ಮಾಡಲಾಗಿದೆ. 12 ವರ್ಷಗಳ ಹಿಂದೆ ನಾನು ಒಪ್ಪಿಕೊಂಡು ನಟಿಸಿದ್ದ ಚಿತ್ರ ಇದಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಸಿನಿಮಾ ಸೇರಿದಂತೆ ಇತರೆ ವಿಷಯಗಳನ್ನೂ ಮಾರ್ಪಡು ಮಾಡಲು ಎಐ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವುದು ಕಳವಳಕಾರಿಯಾಗಿದೆ. ಇದಕ್ಕೆ ಈ ಘಟನೆ ನಿರ್ದಶನವಾಗಿದೆ ಎಂದು ಎಐ ತಂತ್ರಜ್ಞಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.</p>. <p>ಇಂತಹ ತಂತ್ರಜ್ಞಾನದಿಂದ ಕಥೆ ಹೇಳುವ ಸಮಗ್ರತೆ ಮತ್ತು ಸಿನಿಮಾದ ಪರಂಪರೆಗೆ ಧಕ್ಕೆ ತರುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಕಠಿಣ ನಿಯಮಗಳನ್ನು ಜಾರಿಗೆ ತರಬೇಕೆಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದು ಧನುಷ್ ಹೇಳಿದ್ದಾರೆ.</p><p>ತಮ್ಮ ಒಪ್ಪಿಗೆಯಿಲ್ಲದೆ ಕೃತಕ ಬುದ್ಧಿಮತ್ತೆ (ಎಐ) ಸಂಪಾದಿತ ಕ್ಲೈಮ್ಯಾಕ್ಸ್ ದೃಶ್ಯದೊಂದಿಗೆ ಚಿತ್ರವನ್ನು ಮರು ಬಿಡುಗಡೆ ಮಾಡಿದ್ದಕ್ಕಾಗಿ ಚಿತ್ರದ ನಿರ್ದೇಶಕ ಆನಂದ್ ಎಲ್ ರೈ ಕೂಡ ಎರೋಸ್ ಇಂಟರ್ನ್ಯಾಷನಲ್ ಸಂಸ್ಥೆ ವಿರುದ್ಧ ಕಿಡಿಕಾರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆನಂದ್ ರೈ ನಿರ್ದೇಶನದ ನಟ ಧನುಷ್ ಮತ್ತು ಸೋನಂ ಕಪೂರ್ ಅಭಿಯನದ ರಾಂಝಾನಾ ಸಿನಿಮಾವು ರೀ ರಿಲೀಸ್ ಆಗಿದೆ. </p><p>ಈ ನಡುವೆ ರೀ ರಿಲೀಸ್ ಚಿತ್ರದ ಬಗ್ಗೆ ನಾಯಕ ನಟ ಧನುಷ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>2013ರಲ್ಲಿ ಬಿಡುಗಡೆಯಾಗಿದ್ದ ರಾಂಝಾನಾ ಚಿತ್ರವನ್ನು ಕಳೆದ ವಾರ ಮತ್ತೆ ರೀ ರಿಲೀಸ್ ಮಾಡಲಾಗಿದೆ. ಆದರೆ ಚಿತ್ರದಲ್ಲಿ ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನವನ್ನು ಬಳಸಿ ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ಸತ್ತ ನಾಯಕನನ್ನು ಮತ್ತೆ ಬದುಕಿಸಲಾಗಿದೆ. ಇದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ ಎಂದು ಧನುಷ್ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ನಟಿ ರಮ್ಯಾಗೆ ಬೆದರಿಕೆ; ಮತ್ತಿಬ್ಬರ ಬಂಧನ: ಬೇಟೆ ಮುಂದುವರೆದಿದೆ ಎಂದ ಕಮಿಷನರ್.Sandalwood: ಲವ್ ಮಾಕ್ಟೇಲ್–3ಗೆ ಸಜ್ಜಾದ ಕೃಷ್ಣ ಜೋಡಿ. <p>'ಎಐ ಬದಲಾವಣೆಯಿಂದಾಗಿ ಚಿತ್ರದ ಆತ್ಮವೇ ಕಸಿದುಕೊಂಡಿತಿದೆ. ನನ್ನ ಆಕ್ಷೇಪಣೆಯ ಹೊರತಾಗಿಯೂ ಈ ಚಿತ್ರದಲ್ಲಿ ಬದಲಾವಣೆ ಮಾಡಲಾಗಿದೆ. 12 ವರ್ಷಗಳ ಹಿಂದೆ ನಾನು ಒಪ್ಪಿಕೊಂಡು ನಟಿಸಿದ್ದ ಚಿತ್ರ ಇದಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಸಿನಿಮಾ ಸೇರಿದಂತೆ ಇತರೆ ವಿಷಯಗಳನ್ನೂ ಮಾರ್ಪಡು ಮಾಡಲು ಎಐ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವುದು ಕಳವಳಕಾರಿಯಾಗಿದೆ. ಇದಕ್ಕೆ ಈ ಘಟನೆ ನಿರ್ದಶನವಾಗಿದೆ ಎಂದು ಎಐ ತಂತ್ರಜ್ಞಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.</p>. <p>ಇಂತಹ ತಂತ್ರಜ್ಞಾನದಿಂದ ಕಥೆ ಹೇಳುವ ಸಮಗ್ರತೆ ಮತ್ತು ಸಿನಿಮಾದ ಪರಂಪರೆಗೆ ಧಕ್ಕೆ ತರುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಕಠಿಣ ನಿಯಮಗಳನ್ನು ಜಾರಿಗೆ ತರಬೇಕೆಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದು ಧನುಷ್ ಹೇಳಿದ್ದಾರೆ.</p><p>ತಮ್ಮ ಒಪ್ಪಿಗೆಯಿಲ್ಲದೆ ಕೃತಕ ಬುದ್ಧಿಮತ್ತೆ (ಎಐ) ಸಂಪಾದಿತ ಕ್ಲೈಮ್ಯಾಕ್ಸ್ ದೃಶ್ಯದೊಂದಿಗೆ ಚಿತ್ರವನ್ನು ಮರು ಬಿಡುಗಡೆ ಮಾಡಿದ್ದಕ್ಕಾಗಿ ಚಿತ್ರದ ನಿರ್ದೇಶಕ ಆನಂದ್ ಎಲ್ ರೈ ಕೂಡ ಎರೋಸ್ ಇಂಟರ್ನ್ಯಾಷನಲ್ ಸಂಸ್ಥೆ ವಿರುದ್ಧ ಕಿಡಿಕಾರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>