‘ತೆರಿಗೆದಾರರ ಹಣ ಬಳಸಿ ನಿರ್ಮಿಸಿರುವ ರಸ್ತೆಯಲ್ಲಿ ನೀವು ಐಷಾರಾಮಿ ಕಾರಿನಲ್ಲಿ ಸಂಚರಿಸುತ್ತೀರಿ. ಹಾಲು ಹಾಕುವವರು ಮತ್ತು ದಿನಗೂಲಿ ಕಾರ್ಮಿಕರರು ಸಹ ಪ್ರತಿ ಲೀಟರ್ ಪೆಟ್ರೋಲ್ ಖರೀದಿಸಿದ್ದಕ್ಕೆ ತೆರಿಗೆ ಪಾವತಿಸುತ್ತಾರೆ. ಇಂತಹ ತೆರಿಗೆಗಳಿಂದ ವಿನಾಯಿತಿ ನೀಡಬೇಕು ಎಂದು ಕೋರಿ ಇವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿಲ್ಲ’ ಎಂದು ನ್ಯಾಯಮೂರ್ತಿ ಎಸ್.ಎಂ. ಸುಬ್ರಮಣಿಯಂ ಅಭಿಪ್ರಾಯಪಟ್ಟಿದ್ದಾರೆ.