<p><strong>ಮುಂಬೈ</strong>: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಇಂದು ಬೆಳಿಗ್ಗೆ(ಬುಧವಾರ) ಆಸ್ಪತ್ರೆಯಿಂದ ಬಿಡುಗಡೆಯಾದರು.</p><p>ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಧರ್ಮೇಂದ್ರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಕುಟುಂಬ ತಿಳಿಸಿದೆ.</p><p>‘ಧರ್ಮೇಂದ್ರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿಯೇ ಅವರ ಚಿಕಿತ್ಸೆ ಮುಂದುವರಿಯಲಿದೆ. ಈ ಸಮಯದಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ನಮ್ಮ ಕುಟುಂಬದ ಗೌಪತ್ಯೆಯನ್ನು ಗೌರವಿಸಿ’ ಎಂದು ಕುಟುಂಬವು ಮನವಿ ಮಾಡಿದೆ.</p><p>‘ನನ್ನ ತಂದೆಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಕೃತಜ್ಞರಾಗಿದ್ದೇವೆ. ದಯವಿಟ್ಟು ಅವರನ್ನು ಗೌರವದಿಂದ ನೋಡಿ. ಏಕೆಂದರೆ ಅವರು ನಿಮ್ಮನ್ನು ತುಂಬಾ ಪ್ರೀತಿಸುತ್ತಾರೆ’ ಎಂದು ಧರ್ಮೇಂದ್ರ ಅವರ ಮಗ ಸನ್ನಿ ದೇವಲ್ ಹೇಳಿದ್ದಾರೆ.</p><p>‘ಧರ್ಮೇಂದ್ರ ಅವರನ್ನು ಬೆಳಿಗ್ಗೆ 7:30 ರ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಕುಟುಂಬವು ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿರುವುದರಿಂದ ಅಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುವುದು’ ಎಂದು ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಪ್ರತೀತ್ ಸಮದಾನಿ ಹೇಳಿದ್ದಾರೆ.</p><p>ಧರ್ಮೇಂದ್ರ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಪತ್ನಿ ಹೇಮಾ ಮಾಲಿನಿ, ಮಗಳು ಇಶಾ ದೇವಲ್, ಸುಳ್ಳು ಸುದ್ದಿ ಹರಡದಂತೆ, ಕುಟುಂಬದ ಗೌಪತ್ಯೆ ಕಾಪಾಡುವಂತೆ ಮನವಿ ಮಾಡಿದ್ದರು.</p><p>ಏತನ್ಮಧ್ಯೆ, ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಆಸ್ಪತ್ರೆಗೆ ತೆರಳಿ ಹಿರಿಯ ನಟನ ಆರೋಗ್ಯ ವಿಚಾರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಇಂದು ಬೆಳಿಗ್ಗೆ(ಬುಧವಾರ) ಆಸ್ಪತ್ರೆಯಿಂದ ಬಿಡುಗಡೆಯಾದರು.</p><p>ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಧರ್ಮೇಂದ್ರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಕುಟುಂಬ ತಿಳಿಸಿದೆ.</p><p>‘ಧರ್ಮೇಂದ್ರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿಯೇ ಅವರ ಚಿಕಿತ್ಸೆ ಮುಂದುವರಿಯಲಿದೆ. ಈ ಸಮಯದಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ನಮ್ಮ ಕುಟುಂಬದ ಗೌಪತ್ಯೆಯನ್ನು ಗೌರವಿಸಿ’ ಎಂದು ಕುಟುಂಬವು ಮನವಿ ಮಾಡಿದೆ.</p><p>‘ನನ್ನ ತಂದೆಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಕೃತಜ್ಞರಾಗಿದ್ದೇವೆ. ದಯವಿಟ್ಟು ಅವರನ್ನು ಗೌರವದಿಂದ ನೋಡಿ. ಏಕೆಂದರೆ ಅವರು ನಿಮ್ಮನ್ನು ತುಂಬಾ ಪ್ರೀತಿಸುತ್ತಾರೆ’ ಎಂದು ಧರ್ಮೇಂದ್ರ ಅವರ ಮಗ ಸನ್ನಿ ದೇವಲ್ ಹೇಳಿದ್ದಾರೆ.</p><p>‘ಧರ್ಮೇಂದ್ರ ಅವರನ್ನು ಬೆಳಿಗ್ಗೆ 7:30 ರ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಕುಟುಂಬವು ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿರುವುದರಿಂದ ಅಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುವುದು’ ಎಂದು ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಪ್ರತೀತ್ ಸಮದಾನಿ ಹೇಳಿದ್ದಾರೆ.</p><p>ಧರ್ಮೇಂದ್ರ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಪತ್ನಿ ಹೇಮಾ ಮಾಲಿನಿ, ಮಗಳು ಇಶಾ ದೇವಲ್, ಸುಳ್ಳು ಸುದ್ದಿ ಹರಡದಂತೆ, ಕುಟುಂಬದ ಗೌಪತ್ಯೆ ಕಾಪಾಡುವಂತೆ ಮನವಿ ಮಾಡಿದ್ದರು.</p><p>ಏತನ್ಮಧ್ಯೆ, ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಆಸ್ಪತ್ರೆಗೆ ತೆರಳಿ ಹಿರಿಯ ನಟನ ಆರೋಗ್ಯ ವಿಚಾರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>