<p><strong>ಮುಂಬೈ:</strong> ಬಾಲಿವುಡ್ ನಟ ಧರ್ಮೇಂದ್ರ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಆದರೆ ಮಾಧ್ಯಮ ಪ್ರತಿನಿಧಿಗಳು ಅವರ ಮನೆಯ ಬಳಿಯೇ ಕ್ಯಾಮೆರಾ ಹಿಡಿದು ನಿಂತಿರುವುದಕ್ಕೆ ಧರ್ಮೇಂದ್ರ ಅವರ ಪುತ್ರ ನಟ ಸನ್ನಿ ಡಿಯೋಲ್ ಅಸಹನೆ ಹೊರಹಾಕಿದ್ದಾರೆ.</p><p>‘ನಿಮಗೂ ತಂದೆ– ತಾಯಿ, ಮಕ್ಕಳಿದ್ದಾರೆ. ಈ ರೀತಿ ಮನೆಯ ಸುತ್ತ ಸುತ್ತುವರಿದು ನಿಲ್ಲುವುದು ನಿಜಕ್ಕೂ ಮೂರ್ಖತನ, ನಿಮಗೆ ನಾಚಿಕೆಯಾಗುವುದಿಲ್ಲವೇ?’ ಎಂದು ಕಿಡಿಕಾರಿದ್ದಾರೆ. </p><p>ಧರ್ಮೇಂದ್ರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವುದಕ್ಕೂ ಮುನ್ನ ಮಾಧ್ಯಮಗಳಲ್ಲಿ ಅವರು ನಿಧನರಾಗಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಸುದ್ದಿ ಸುಳ್ಳು ಎಂದು ಸನ್ನಿ ಡಿಯೋಲ್, ಹೇಮಾ ಮಾಲಿನಿ ಸ್ಪಷ್ಟಪಡಿಸಿದ್ದರು. ಜತೆಗೆ ‘ನಮ್ಮ ಖಾಸಗಿತನವನ್ನು ಗೌರವಿಸಿ’ ಎಂದು ಕೇಳಿಕೊಂಡಿದ್ದರು.</p><p>ಆನಂತರ ಅವರು ಮನೆಗೆ ತೆರಳಿದಾಗಿನಿಂದ ಅವರ ಮನೆಗೆ ಬಂದು ಹೋಗುವವರನ್ನು ಮಾತನಾಡಿಸಿ ಮಾಧ್ಯಮಗಳು ನಿರಂತರವಾಗಿ ಮಾಹಿತಿ ಕಲೆ ಹಾಕುತ್ತಿದ್ದವು. </p><p>ಇದಕ್ಕೆ ಸಿಟ್ಟಾಗಿರುವ ಸನ್ನಿ ಡಿಯೋಲ್ ಆಕ್ರೋಶ ಹೊರಹಾಕಿದ್ದಾರೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಮಾಧ್ಯಮಗಳು ಧರ್ಮೇಂದ್ರ ಅವರ ನಿಧನ ಸುದ್ದಿಯನ್ನು ಹರಿಬಿಟ್ಟ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದ ಹೇಮಾ ಮಾಲಿನಿ, ‘ಬೇಜವಾಬ್ದಾರಿ ನಡೆ’ ಎಂದಿದ್ದರು.</p>.ನಟ ಧರ್ಮೇಂದ್ರ ಆಸ್ಪತ್ರೆಯಿಂದ ಬಿಡುಗಡೆ; ಮನೆಯಲ್ಲೇ ಚಿಕಿತ್ಸೆ ನೀಡಲು ನಿರ್ಧಾರ.ಧರ್ಮೇಂದ್ರ ಆರೋಗ್ಯ ಸ್ಥಿರ, ಸುಳ್ಳು ಸುದ್ದಿ ಹರಡಬೇಡಿ: ಕುಟುಂಬಸ್ಥರ ಬೇಸರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಾಲಿವುಡ್ ನಟ ಧರ್ಮೇಂದ್ರ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಆದರೆ ಮಾಧ್ಯಮ ಪ್ರತಿನಿಧಿಗಳು ಅವರ ಮನೆಯ ಬಳಿಯೇ ಕ್ಯಾಮೆರಾ ಹಿಡಿದು ನಿಂತಿರುವುದಕ್ಕೆ ಧರ್ಮೇಂದ್ರ ಅವರ ಪುತ್ರ ನಟ ಸನ್ನಿ ಡಿಯೋಲ್ ಅಸಹನೆ ಹೊರಹಾಕಿದ್ದಾರೆ.</p><p>‘ನಿಮಗೂ ತಂದೆ– ತಾಯಿ, ಮಕ್ಕಳಿದ್ದಾರೆ. ಈ ರೀತಿ ಮನೆಯ ಸುತ್ತ ಸುತ್ತುವರಿದು ನಿಲ್ಲುವುದು ನಿಜಕ್ಕೂ ಮೂರ್ಖತನ, ನಿಮಗೆ ನಾಚಿಕೆಯಾಗುವುದಿಲ್ಲವೇ?’ ಎಂದು ಕಿಡಿಕಾರಿದ್ದಾರೆ. </p><p>ಧರ್ಮೇಂದ್ರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವುದಕ್ಕೂ ಮುನ್ನ ಮಾಧ್ಯಮಗಳಲ್ಲಿ ಅವರು ನಿಧನರಾಗಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಸುದ್ದಿ ಸುಳ್ಳು ಎಂದು ಸನ್ನಿ ಡಿಯೋಲ್, ಹೇಮಾ ಮಾಲಿನಿ ಸ್ಪಷ್ಟಪಡಿಸಿದ್ದರು. ಜತೆಗೆ ‘ನಮ್ಮ ಖಾಸಗಿತನವನ್ನು ಗೌರವಿಸಿ’ ಎಂದು ಕೇಳಿಕೊಂಡಿದ್ದರು.</p><p>ಆನಂತರ ಅವರು ಮನೆಗೆ ತೆರಳಿದಾಗಿನಿಂದ ಅವರ ಮನೆಗೆ ಬಂದು ಹೋಗುವವರನ್ನು ಮಾತನಾಡಿಸಿ ಮಾಧ್ಯಮಗಳು ನಿರಂತರವಾಗಿ ಮಾಹಿತಿ ಕಲೆ ಹಾಕುತ್ತಿದ್ದವು. </p><p>ಇದಕ್ಕೆ ಸಿಟ್ಟಾಗಿರುವ ಸನ್ನಿ ಡಿಯೋಲ್ ಆಕ್ರೋಶ ಹೊರಹಾಕಿದ್ದಾರೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಮಾಧ್ಯಮಗಳು ಧರ್ಮೇಂದ್ರ ಅವರ ನಿಧನ ಸುದ್ದಿಯನ್ನು ಹರಿಬಿಟ್ಟ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದ ಹೇಮಾ ಮಾಲಿನಿ, ‘ಬೇಜವಾಬ್ದಾರಿ ನಡೆ’ ಎಂದಿದ್ದರು.</p>.ನಟ ಧರ್ಮೇಂದ್ರ ಆಸ್ಪತ್ರೆಯಿಂದ ಬಿಡುಗಡೆ; ಮನೆಯಲ್ಲೇ ಚಿಕಿತ್ಸೆ ನೀಡಲು ನಿರ್ಧಾರ.ಧರ್ಮೇಂದ್ರ ಆರೋಗ್ಯ ಸ್ಥಿರ, ಸುಳ್ಳು ಸುದ್ದಿ ಹರಡಬೇಡಿ: ಕುಟುಂಬಸ್ಥರ ಬೇಸರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>