ಬೆಂಗಳೂರಿನ ಜೆ.ಪಿ. ನಗರದಲ್ಲಿ ಇರುವ ಸಂಸ್ಕೃತಿ ಬೃಂದಾವನ ಕನ್ವೆನ್ಷನ್ ಹಾಲ್ನಲ್ಲಿ ನಾಳೆ ಬೆಳಿಗ್ಗೆ 7.15ರಿಂದ 7.45ರವರೆಗೆ ವೃಶ್ಚಿಕ ಲಗ್ನದಲ್ಲಿ ಮುಹೂರ್ತ ನಡೆಯಲಿದೆ. ಅಂದು ಸಂಜೆ 7ಗಂಟೆಗೆ ಆರತಕ್ಷತೆ ಹಮ್ಮಿಕೊಳ್ಳಲಾಗಿದೆ. ಕನ್ನಡ ಚಿತ್ರತಂಡದ ನಟ, ನಟಿಯರು ಸೇರಿದಂತೆ ಹಲವು ಗಣ್ಯರು ಆಗಮಿಸುವ ನಿರೀಕ್ಷೆ ಇದೆ. ನವೆಂಬರ್ 25ರಂದು ಅದೇ ಹಾಲ್ನಲ್ಲಿ ಧ್ರುವ ಸರ್ಜಾ ಅವರ ಅಭಿಮಾನಿಗಳಿಗಾಗಿಯೇ ಔತಣಕೂಟ ಕೂಡ ಏರ್ಪಡಿಸಲಾಗಿದೆ. ಅಭಿಮಾನಿಗಳು ಆಗಮಿಸಬೇಕು ಎಂದು ಸರ್ಜಾ ಕುಟುಂಬ ಕೋರಿದೆ.