<p>ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಕೆಲ ದಿನಗಳ ಹಿಂದೆ ವಿಶ್ವದಾದಂತ್ಯ ಬಿಡುಗಡೆಯಾಗಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡುತ್ತಿದೆ. ಈ ನಡುವೆ ಕೊಲ್ಲಿ ದೇಶಗಳು (Gulf Countries) ಈ ಸಿನಿಮಾದ ಪ್ರದರ್ಶನ ತಡೆಹಿಡಿದಿವೆ.</p>.ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ.<p>ಕೊಲ್ಲಿ ದೇಶಗಳಾದ ಯುಎಇ, ಸೌದಿ ಅರೇಬಿಯಾ, ಕತಾರ್, ಬಹರೇನ್, ಕುವೈತ್ ಹಾಗೂ ಒಮಾನ್ನಲ್ಲಿ ‘ಧುರಂಧರ್’ ಚಿತ್ರದ ಪ್ರದರ್ಶನವನ್ನು ನಿಷೇಧಿಸಿದ್ದಾರೆ. ಈ ದೇಶಗಳಲ್ಲಿ ಭಾರತೀಯ ಸಿನಿಮಾಗಳು ಹೆಚ್ಚು ಪ್ರಸಿದ್ಧಿ ಪಡೆಯುತ್ತವೆ ಎಂಬ ಕಾರಣಕ್ಕೆ ಚಿತ್ರ ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಸಿದ್ದತೆ ನಡೆಸಿಕೊಂಡಿದ್ದರು. </p><p>ಆದರೆ ಚಿತ್ರದ ಕುರಿತು ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು, ಈ ಸಿನಿಮಾದಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದ ವಿಚಾರಗಳು ಇರುವುದರಿಂದ ಚಿತ್ರ ಪ್ರದರ್ಶನ ತಡೆಹಿಡಿದಿರುವುದಾಗಿ ವರದಿಯೊಂದು ಹೇಳಿದೆ. </p><p>ಈ ದೇಶದಲ್ಲಿ ಬಾಲಿವುಡ್ ಚಿತ್ರಗಳು ನಿಷೇಧಕ್ಕೊಳಗಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ‘ಫೈಟರ್’, ‘ಸ್ಕೈ ಫೋರ್ಸ್’, ‘ದಿ ಡಿಪ್ಲೊಮ್ಯಾಟ್’, ‘ಆರ್ಟಿಕಲ್ 370’, ‘ಟೈಗರ್ 3’ ‘ದಿ ಕಾಶ್ಮೀರ್ ಫೈಲ್’ ಚಿತ್ರಗಳನ್ನು ನಿಷೇಧಿಸಲಾಗಿತ್ತು. </p>.ಲಂಗ ದಾವಣಿಯುಟ್ಟು ‘ಜೇನ ದನಿಯೋಳೆ ಮೀನ ಕಣ್ಣೋಳೆ’ ಹಾಡು ನೆನಪಿಸಿದ ನಟಿ ಶರಣ್ಯಾ.<p>ಕೊಲ್ಲಿ ದೇಶಗಳಲ್ಲಿ ಈ ಚಿತ್ರದ ನಿಷೇಧದ ಹೊರತಾಗಿಯೂ, ‘ಧುರಂಧರ್‘ ಸಿನಿಮಾವು ಮೊದಲ ವಾರದಲ್ಲೇ ಭಾರತದಲ್ಲಿ ₹ 200 ಕೋಟಿ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ₹ 44.5 ಕೋಟಿ ಗಳಿಸಿದೆ.</p><p>ಆದಿತ್ಯ ಧರ್ ನಿರ್ದೇಶನದ ‘ಧುರಂಧರ್‘ ಸಿನಿಮಾದಲ್ಲಿ ರಣ್ವೀರ್ ಸಿಂಗ್, ಸಂಜಯ್ ದತ್, ಅಕ್ಷಯ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಸೇರಿದಂತೆ ಅನೇಕರು ನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಕೆಲ ದಿನಗಳ ಹಿಂದೆ ವಿಶ್ವದಾದಂತ್ಯ ಬಿಡುಗಡೆಯಾಗಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡುತ್ತಿದೆ. ಈ ನಡುವೆ ಕೊಲ್ಲಿ ದೇಶಗಳು (Gulf Countries) ಈ ಸಿನಿಮಾದ ಪ್ರದರ್ಶನ ತಡೆಹಿಡಿದಿವೆ.</p>.ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ.<p>ಕೊಲ್ಲಿ ದೇಶಗಳಾದ ಯುಎಇ, ಸೌದಿ ಅರೇಬಿಯಾ, ಕತಾರ್, ಬಹರೇನ್, ಕುವೈತ್ ಹಾಗೂ ಒಮಾನ್ನಲ್ಲಿ ‘ಧುರಂಧರ್’ ಚಿತ್ರದ ಪ್ರದರ್ಶನವನ್ನು ನಿಷೇಧಿಸಿದ್ದಾರೆ. ಈ ದೇಶಗಳಲ್ಲಿ ಭಾರತೀಯ ಸಿನಿಮಾಗಳು ಹೆಚ್ಚು ಪ್ರಸಿದ್ಧಿ ಪಡೆಯುತ್ತವೆ ಎಂಬ ಕಾರಣಕ್ಕೆ ಚಿತ್ರ ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಸಿದ್ದತೆ ನಡೆಸಿಕೊಂಡಿದ್ದರು. </p><p>ಆದರೆ ಚಿತ್ರದ ಕುರಿತು ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು, ಈ ಸಿನಿಮಾದಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದ ವಿಚಾರಗಳು ಇರುವುದರಿಂದ ಚಿತ್ರ ಪ್ರದರ್ಶನ ತಡೆಹಿಡಿದಿರುವುದಾಗಿ ವರದಿಯೊಂದು ಹೇಳಿದೆ. </p><p>ಈ ದೇಶದಲ್ಲಿ ಬಾಲಿವುಡ್ ಚಿತ್ರಗಳು ನಿಷೇಧಕ್ಕೊಳಗಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ‘ಫೈಟರ್’, ‘ಸ್ಕೈ ಫೋರ್ಸ್’, ‘ದಿ ಡಿಪ್ಲೊಮ್ಯಾಟ್’, ‘ಆರ್ಟಿಕಲ್ 370’, ‘ಟೈಗರ್ 3’ ‘ದಿ ಕಾಶ್ಮೀರ್ ಫೈಲ್’ ಚಿತ್ರಗಳನ್ನು ನಿಷೇಧಿಸಲಾಗಿತ್ತು. </p>.ಲಂಗ ದಾವಣಿಯುಟ್ಟು ‘ಜೇನ ದನಿಯೋಳೆ ಮೀನ ಕಣ್ಣೋಳೆ’ ಹಾಡು ನೆನಪಿಸಿದ ನಟಿ ಶರಣ್ಯಾ.<p>ಕೊಲ್ಲಿ ದೇಶಗಳಲ್ಲಿ ಈ ಚಿತ್ರದ ನಿಷೇಧದ ಹೊರತಾಗಿಯೂ, ‘ಧುರಂಧರ್‘ ಸಿನಿಮಾವು ಮೊದಲ ವಾರದಲ್ಲೇ ಭಾರತದಲ್ಲಿ ₹ 200 ಕೋಟಿ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ₹ 44.5 ಕೋಟಿ ಗಳಿಸಿದೆ.</p><p>ಆದಿತ್ಯ ಧರ್ ನಿರ್ದೇಶನದ ‘ಧುರಂಧರ್‘ ಸಿನಿಮಾದಲ್ಲಿ ರಣ್ವೀರ್ ಸಿಂಗ್, ಸಂಜಯ್ ದತ್, ಅಕ್ಷಯ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಸೇರಿದಂತೆ ಅನೇಕರು ನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>