<p>ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಡಿಸೆಂಬರ್ 5ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟಿರುವ ಈ ಸಿನಿಮಾ ಒಂದೇ ವಾರದಲ್ಲಿ ₹ 250 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂಬುದಾಗಿ ನಿರ್ಮಾಪಕರು ತಿಳಿಸಿದ್ದಾರೆ.</p><p>ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಈ ಸಿನಿಮಾ ಪ್ರದರ್ಶನಕ್ಕೂ ಮುನ್ನ, ಚಿತ್ರಮಂದಿರದಲ್ಲಿ ನಡೆದಿರುವ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ದೇಶಭಕ್ತಿ, ವೈಯಕ್ತಿಕ ಆಯ್ಕೆ ಹಾಗೂ ಚಿತ್ರಮಂದಿರದಲ್ಲಿನ ವರ್ತನೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.</p><p>ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನಕ್ಕೂ ಮುನ್ನ ಪ್ರಸಾರವಾಗುವ ರಾಷ್ಟ್ರಗೀತೆಗೆ ಎದ್ದು ನಿಂತು ಗೌರವ ನೀಡಲಿಲ್ಲ ಎಂಬ ಆರೋಪದ ಮೇಲೆ ಯುವಕನೊಬ್ಬನನ್ನು ಹೊರಗೆ ಕಳುಹಿಸಿರುವ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.</p><p>'ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿತ್ತು. ಹೆಚ್ಚಿನ ಪ್ರೇಕ್ಷಕರು, ಹೊರಗೆ ಹೋಗುವಂತೆ ಆತನನ್ನು ಒತ್ತಾಯಿಸಿದರು. ಅಷ್ಟರಲ್ಲಿ ಚಿತ್ರಮಂದಿರದ ಸಿಬ್ಬಂದಿ ಮಧ್ಯಪ್ರವೇಶಿಸಿದರು. ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ, ಯುವಕನಿಗೆ ಟಿಕೆಟ್ ಹಣವನ್ನು ಹಿಂತಿರುಗಿಸಿದರು' ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ವಿಡಿಯೊ ಹಂಚಿಕೊಂಡಿರುವ ಹಲವು ನೆಟ್ಟಿಗರು, ಚಿತ್ರಮಂದಿರದಲ್ಲಿದ್ದವರ ನಡೆಯನ್ನು ಶ್ಲಾಘಿಸಿದ್ದಾರೆ. ಆದರೆ ಕೆಲವರು, ಯುವಕನ ಮೇಲೆ ಬಲವಂತವಾಗಿ ದೇಶಭಕ್ತಿಯನ್ನು ಹೇರುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದ್ದಾರೆ.</p><p>'ಇಂತಹ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ರಾಷ್ಟ್ರಗೀತೆ ಗೌರವ ನೀಡದವನನ್ನು ದೇಶಭಕ್ತರು ಹೊರಗಟ್ಟಿದ್ದಾರೆ' ಎಂದು ವ್ಯಕ್ತಿಯೊಬ್ಬರು ಬರೆದುಕೊಂಡಿದ್ದಾರೆ.</p><p>ಅಂದಹಾಗೆ, ಈ ಘಟನೆ ನಡೆದಿರುವುದು ಎಲ್ಲಿ ಎಂಬುದು ಸ್ಪಷ್ಟವಾಗಿ ವರದಿಯಾಗಿಲ್ಲ.</p><p>ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾದಲ್ಲಿ ರಣವೀರ್ ಜೊತೆಗೆ, ಸಂಜಯ್ ದತ್, ಆಕ್ಷಯ್ ಖನ್ನಾ, ಅರ್ಜನ್ ರಾಮ್ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಮತ್ತು ರಾಕೇಶ್ ಬೇಡಿ ತೆರೆ ಹಂಚಿಕೊಂಡಿದ್ದಾರೆ.</p><p>ಆದಿತ್ಯ ಧರ್, ಅವರ ಸಹೋದರ ಲೋಕೇಶ್ ಧರ್ ಮತ್ತು ಜ್ಯೋತಿ ದೇಶಪಾಂಡೆ ಅವರು ಬಂಡವಾಳ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಡಿಸೆಂಬರ್ 5ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟಿರುವ ಈ ಸಿನಿಮಾ ಒಂದೇ ವಾರದಲ್ಲಿ ₹ 250 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂಬುದಾಗಿ ನಿರ್ಮಾಪಕರು ತಿಳಿಸಿದ್ದಾರೆ.</p><p>ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಈ ಸಿನಿಮಾ ಪ್ರದರ್ಶನಕ್ಕೂ ಮುನ್ನ, ಚಿತ್ರಮಂದಿರದಲ್ಲಿ ನಡೆದಿರುವ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ದೇಶಭಕ್ತಿ, ವೈಯಕ್ತಿಕ ಆಯ್ಕೆ ಹಾಗೂ ಚಿತ್ರಮಂದಿರದಲ್ಲಿನ ವರ್ತನೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.</p><p>ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನಕ್ಕೂ ಮುನ್ನ ಪ್ರಸಾರವಾಗುವ ರಾಷ್ಟ್ರಗೀತೆಗೆ ಎದ್ದು ನಿಂತು ಗೌರವ ನೀಡಲಿಲ್ಲ ಎಂಬ ಆರೋಪದ ಮೇಲೆ ಯುವಕನೊಬ್ಬನನ್ನು ಹೊರಗೆ ಕಳುಹಿಸಿರುವ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.</p><p>'ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿತ್ತು. ಹೆಚ್ಚಿನ ಪ್ರೇಕ್ಷಕರು, ಹೊರಗೆ ಹೋಗುವಂತೆ ಆತನನ್ನು ಒತ್ತಾಯಿಸಿದರು. ಅಷ್ಟರಲ್ಲಿ ಚಿತ್ರಮಂದಿರದ ಸಿಬ್ಬಂದಿ ಮಧ್ಯಪ್ರವೇಶಿಸಿದರು. ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ, ಯುವಕನಿಗೆ ಟಿಕೆಟ್ ಹಣವನ್ನು ಹಿಂತಿರುಗಿಸಿದರು' ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ವಿಡಿಯೊ ಹಂಚಿಕೊಂಡಿರುವ ಹಲವು ನೆಟ್ಟಿಗರು, ಚಿತ್ರಮಂದಿರದಲ್ಲಿದ್ದವರ ನಡೆಯನ್ನು ಶ್ಲಾಘಿಸಿದ್ದಾರೆ. ಆದರೆ ಕೆಲವರು, ಯುವಕನ ಮೇಲೆ ಬಲವಂತವಾಗಿ ದೇಶಭಕ್ತಿಯನ್ನು ಹೇರುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದ್ದಾರೆ.</p><p>'ಇಂತಹ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ರಾಷ್ಟ್ರಗೀತೆ ಗೌರವ ನೀಡದವನನ್ನು ದೇಶಭಕ್ತರು ಹೊರಗಟ್ಟಿದ್ದಾರೆ' ಎಂದು ವ್ಯಕ್ತಿಯೊಬ್ಬರು ಬರೆದುಕೊಂಡಿದ್ದಾರೆ.</p><p>ಅಂದಹಾಗೆ, ಈ ಘಟನೆ ನಡೆದಿರುವುದು ಎಲ್ಲಿ ಎಂಬುದು ಸ್ಪಷ್ಟವಾಗಿ ವರದಿಯಾಗಿಲ್ಲ.</p><p>ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾದಲ್ಲಿ ರಣವೀರ್ ಜೊತೆಗೆ, ಸಂಜಯ್ ದತ್, ಆಕ್ಷಯ್ ಖನ್ನಾ, ಅರ್ಜನ್ ರಾಮ್ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಮತ್ತು ರಾಕೇಶ್ ಬೇಡಿ ತೆರೆ ಹಂಚಿಕೊಂಡಿದ್ದಾರೆ.</p><p>ಆದಿತ್ಯ ಧರ್, ಅವರ ಸಹೋದರ ಲೋಕೇಶ್ ಧರ್ ಮತ್ತು ಜ್ಯೋತಿ ದೇಶಪಾಂಡೆ ಅವರು ಬಂಡವಾಳ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>