ಸಾಗರ, ಸಿಗಂಧೂರು, ಬೆಂಗಳೂರಿನ ಸುಂದರ ಪರಿಸರಗಳಲ್ಲಿ ಚಿತ್ರೀಕರಣ ನಡೆದಿದೆ. ನಂದಕಿಶೋರ್ ಎನ್. ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ.
ಹಿರಿಯ ನಟಿ ಉಮಾಶ್ರೀ, ರಂಜನಿ ರಾಫವನ್, ಪಿ.ಡಿ.ಸತೀಶ್ ಚಂದ್ರ, ಪ್ರಕಾಶ್ ತೂಮಿನಾಡ್ ಹಾಗೂ ನೀನಾಸಂನ ಹಲವು ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ.