ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ದಿಗಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಅವರ ಪತ್ನಿ, ನಟಿ ಐಂದ್ರಿತಾ ರೈ ಟ್ವೀಟ್ ಮಾಡಿದ್ದಾರೆ.
ನಿನ್ನೆ ದಿಗಂತ್ ಅವರಿಗೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ ಎಂದು ನಿಮ್ಮೆಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ. ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.
Happy to let you all know that Diganth’s surgery went well yesterday and he is on the road to a speedy recovery! Heartfelt thanks to all the fans, well wishers, friends in the media and KFI for their prayers and best wishes!🙏🏼 pic.twitter.com/f2rgyZRIpk
ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಅವರಿಗೆ ಕುತ್ತಿಗೆ ಭಾಗದಲ್ಲಿ ಗಾಯವಾಗಿತ್ತು.ಹೆಲಿಕಾಪ್ಟರ್ ಮೂಲಕ ಇಲ್ಲಿನ ಆಸ್ಪತ್ರೆಗೆ ಕರೆತರಲಾಗಿತ್ತು. ನುರಿತ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು. ಅವರು ಬುಧವಾರ ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ದಿಗಂತ್ ಆರೋಗ್ಯವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.